Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ಪ್ರಕರಣ: ರಿಪಬ್ಲಿಕ್ ಟಿವಿ, ಇಂಡಿಯಾ ಟಿವಿ ವರದಿ ಬಗ್ಗೆ ಸುಪ್ರೀಂ ಅಸಮಾಧಾನ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ದೇಶದ ಗಮನ ಸೆಳೆದಿತ್ತು. ಮಾಧ್ಯಮಗಳಂತೂ ತಿಂಗಳಾನುಗಟ್ಟಲೆ ಈ ಕುರಿತು ಸುದ್ದಿಗಳನ್ನು ಪ್ರಸಾರ ಮಾಡಿತು.
ಕೆಲವು ಟಿವಿ ಮಾಧ್ಯಮಗಳಂತೂ ಕೊಲೆಯ ತನಿಖೆ ನಡೆಸಿ ತೀರ್ಪನ್ನೂ ನೀಡಿ ರಿಯಾ ಚಕ್ರವರ್ತಿ ಮತ್ತಿತರರನ್ನು ಅಪರಾಧಿಗಳೆಂದು ನಿರ್ಣಯಿಸಿಬಿಟ್ಟವು. ರಿಯಾ ಅನ್ನು ಬಂಧಿಸಬೇಕು ಎಂದು ಸ್ವತಃ ರಿಪಬ್ಲಿಕ್ ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿ ಅರಚಾಡಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ರಿಪಬ್ಲಿಕ್ ಟಿವಿ ಹಾಗೂ ಟೈಮ್ಸ್ ನೌ ಮಾಧ್ಯಮಗಳ ವರದಿಗಳು ಪ್ರಾಥಮಿಕ ಸಾಕ್ಷ್ಯಗಳನ್ನು ತಿರಸ್ಕರಿಸಿ ಮಾಡಿದ ವರದಿಗಳು ಎಂದು ಹೇಳಿದೆ. ಆದರೆ ಆ ಮಾಧ್ಯಮಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ನಿರಾಕರಿಸಿದೆ ಬಾಂಬೆ ಹೈಕೋರ್ಟ್.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, 'ಅಪರಾಧದ ದೃಶ್ಯಗಳ ಪುನರ್ನಿರ್ಮಾಣ, ಸಂಭಾವ್ಯ ಸಾಕ್ಷಿಗಳ ಸಂದರ್ಶನ, ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡುವುದನ್ನು ಮಾಧ್ಯಮಗಳು ಮಾಡಬಾರದು' ಎಂದಿದ್ದಾರೆ.
ಅಪರಾಧ ಪ್ರಕರಣ ಕುರಿತಾಗಿ ಮಾಧ್ಯಮ ಸಂವಾದಗಳು, ವಿಶೇಷ ಸಂದರ್ಶನಗಳನ್ನು ಮಾಧ್ಯಮಗಳು ಮಾಡಬಾರದು ಎಂದು ಸಹ ಹೈಕೋರ್ಟ್ ಹೇಳಿದೆ.
ಸುಶಾಂತ್ ಸಿಂಗ್ ಪ್ರಕರಣದ ವರದಿ ಮಾಡುವಾಗ ಮಾಧ್ಯಮಗಳು ಸಂಯಮದಿಂದ ವರದಿ ಮಾಡಬೇಕು ಎಂದು ಈ ಹಿಂದೆ ಸಹ ಬಾಂಬೆ ಹೈಕೋರ್ಟ್ ಸೂಚಿಸಿತ್ತು.