Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ರಿಯಾಲಿಟಿ ಶೋಗೆ ಸ್ವಾಮಿ ನಿತ್ಯಾನಂದ?
ಸಿನಿಮಾ ತಾರೆಗಳು, ಹಾಟ್ ಬೆಡಗಿಯರು, ಸ್ವಾಮೀಜಿಗಳು, ವಿವಾದಾತ್ಮಕ ವ್ಯಕ್ತಿಗಳನ್ನು ಕರೆತರುವಲ್ಲಿ ಶೋನ ನಿರ್ವಾಹಕರು ಉಳಿದೆಲ್ಲಾ ರಿಯಾಲಿಟಿ ಶೋಗಳಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ ಎಂದೇ ಹೇಳಬೇಕು.
ಈಗ ಈ ಶೋನ 6ನೇ ಸೀಸನ್ ಗೆ ವಿವಾದಾತ್ಮಕ ದೇವಮಾನವ ಎಂದೇ ಕರೆಸಿಕೊಂಡಿರುವ ಸ್ವಾಮಿ ನಿತ್ಯಾನಂದ ಅವವರನ್ನು ಕರೆತರಲು ಶೋನ ಆಯೋಜಕರು ಮುಂದಾಗಿದ್ದಾರೆ. ಸ್ವಾಮಿ ನಿತ್ಯಾನಂದರ ಪರಿಚಯ ಎಲ್ಲರಿಗೂ ಇದ್ದೇ ಇದೆ ಎಂದು ಭಾವಿಸುತ್ತೇನೆ. ಇಲ್ಲಿ ಅವರ ಹಳೆಯ ವಿಡಿಯೋ ಕಥೆಯನ್ನು ಮತೊಮ್ಮೆ ನೆನಪಿಸುವ ಗೋಜಿಗೆ ನಾವು ಹೋಗುತ್ತಿಲ್ಲ.
ಹೌದೆ ಸ್ವಾಮಿಜಿಗಳು 'ಬಿಗ್ ಬಾಸ್ 6'ಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರಂತೆ ಎಂದು ಈ ಬಗ್ಗೆ ನಿತ್ಯಾನಂದ ಅವರ ವಕ್ತಾರ ದಲೆ ಭಗ್ವಾಗರ್ ಅವರನ್ನು ಕೇಳಲಾಗಿ ಅವರು, "ಈ ಹಿಂದೆ ಸಾಕಷ್ಟು ಸಲ ಸ್ವಾಮಿಜೀಗಳನ್ನು ಆಹ್ವಾನಿಸಲಾಗಿತ್ತು. ಆದರೆ ಅವರು ಭಾಗವಹಿಸುತ್ತಾರೋ ಇಲ್ಲವೋ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ" ಎಂದು ಮೌನಕ್ಕೆ ಶರಣಾಗಿದ್ದಾರೆ.
'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸುವವರ ಬಗ್ಗೆ ತುಂಬಾ ರಹಸ್ಯ ಕಾಪಾಡಿಕೊಂಡುಬರಲಾಗುತ್ತಿದೆ. ಸ್ವಾಮಿ ನಿತ್ಯಾನಂದ ಅವರ ವಿಷಯದಲ್ಲೂ ಹೀಗಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸತ್ಯಾಸತ್ಯತೆಗಳು ಇನ್ನಷ್ಟೇ ಗೊತ್ತಾಗಬೇಕು.
'ಬಿಗ್ ಬಾಸ್ 6' ರಿಯಾಲಿಟಿ ಶೋ ಅಕ್ಟೋಬರ್ 7, 2012ರಿಂದ ಜನವರಿ 2013ರವರೆಗೆ ನಡೆಯಲಿದೆ. ರಾತ್ರಿ 9 ಗಂಟೆ ಈ ಶೋ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಬಾರಿಯ ಶೋ ನಟ ಸಲ್ಮಾನ್ ಖಾನ್ ಸಮರ್ಪಿಸಲಿದ್ದಾರೆ. (ಏಜೆನ್ಸೀಸ್)