Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಸೀಸನ್ 2' ಶೋಗೆ ಸ್ವಾಮಿ ನಿತ್ಯಾನಂದ?
ಕನ್ನಡದ ಬಿಗ್ ರಿಯಾಲಿಟಿ ಶೋ 'ಬಿಗ್ ಬಾಸ್ 2'ಗೆ ವೇದಿಕೆ ಸಿದ್ಧವಾಗುತ್ತಿದೆ. ಈ ಬಾರಿ ಯಾರೆಲ್ಲಾ ಪ್ರಮುಖರು ಶೋನಲ್ಲಿ ಇರುತ್ತಾರೆ ಎಂಬ ಬಗ್ಗೆ ಕುತೂಹಲವಂತೂ ಇದ್ದೇ ಇದೆ. ಈಗಾಗಲೆ ಹಲವಾರು ಹೆಸರುಗಳು ಕೇಳಿಬಂದಿದ್ದು ಈಗ ಹೊಸ ಸ್ವಾಮೀಜಿಯ ಹೆಸರು ಕೇಳಿಬಂದಿದೆ.
ಮೊದಲ ಆವೃತ್ತಿಯಲ್ಲಿ ಇಬ್ಬರು ಸ್ವಾಮೀಜಿಗಳಾದ ಬ್ರಹ್ಮಾಂಡ ಗುರೂಜಿ ಹಾಗೂ ಕಾಳಿಮಠದ ರಿಷಿಕುಮಾರ ಸ್ವಾಮೀಜಿ ಇಬ್ಬರೂ ಕಾಣಿಸಿಕೊಂಡು ಕಿರುತೆರೆ ವೀಕ್ಷಕರಿಗೆ ಸಖತ್ ಮನರಂಜನೆ ಕೊಟ್ಟಿದ್ದರು. ಈಗ ಬಿಗ್ ಬಾಸ್ 2ಗೆ ಕೇಳಿಬಂದಿರುವ ಸ್ವಾಮೀಜಿ ಹೆಸರು ಬಿಡದಿಯ ನಿತ್ಯಾನಂದ. ['ಬಿಗ್ ಬಾಸ್ 2' ಶೋನಲ್ಲಿ ಇವರೆಲ್ಲಾ ಇರ್ತಾರಾ?]
ಹಲವಾರು ಆರೋಪ, ಅನೇಕ ಅನಿರೀಕ್ಷಿತ ಘಟನೆಗಳ ಕಾರಣ ಸ್ವಾಮಿ ನಿತ್ಯಾನಂದ ಅವರು ವಿವಾದಾಸ್ಪದ ಸ್ವಾಮಿ ಎನ್ನಿಸಿಕೊಂಡಿದ್ದಾರೆ. ಈಗ ಅವರು ಅಷ್ಟೋ ಇಷ್ಟೋ ರಿಲ್ಯಾಕ್ಸ್ ಆಗಲು 'ಬಿಗ್ ಬಾಸ್' ಶೋ ಅವರ ಪಾಲಿಗೆ ಹೇಳಿ ಮಾಡಿಸಿದಂತಿದೆ.
ಬಿಗ್ ಬಾಸ್ 2 ಶೋನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ರಾಗಿಣಿ, ಜಗ್ಗೇಶ್, ರೇಣುಕಾಚಾರ್ಯ, ಪ್ರೇಮಕುಮಾರಿ (ರಾಮದಾಸ್ ಪ್ರಕರಣ), ಮಾಸ್ಟರ್ ಆನಂದ್, ರಾಧಿಕಾ ಕುಮಾರಸ್ವಾಮಿ, ಸುಮನ್ ರಂಗನಾಥ್ ಮುಂತಾದವರ ಹೆಸರುಗಳು ಕೇಳಿಬಂದಿವೆ.