Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 28, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಸೀಸನ್ 2' ಶೋಗೆ ಸ್ವಾಮಿ ನಿತ್ಯಾನಂದ?
ಕನ್ನಡದ ಬಿಗ್ ರಿಯಾಲಿಟಿ ಶೋ 'ಬಿಗ್ ಬಾಸ್ 2'ಗೆ ವೇದಿಕೆ ಸಿದ್ಧವಾಗುತ್ತಿದೆ. ಈ ಬಾರಿ ಯಾರೆಲ್ಲಾ ಪ್ರಮುಖರು ಶೋನಲ್ಲಿ ಇರುತ್ತಾರೆ ಎಂಬ ಬಗ್ಗೆ ಕುತೂಹಲವಂತೂ ಇದ್ದೇ ಇದೆ. ಈಗಾಗಲೆ ಹಲವಾರು ಹೆಸರುಗಳು ಕೇಳಿಬಂದಿದ್ದು ಈಗ ಹೊಸ ಸ್ವಾಮೀಜಿಯ ಹೆಸರು ಕೇಳಿಬಂದಿದೆ.
ಮೊದಲ ಆವೃತ್ತಿಯಲ್ಲಿ ಇಬ್ಬರು ಸ್ವಾಮೀಜಿಗಳಾದ ಬ್ರಹ್ಮಾಂಡ ಗುರೂಜಿ ಹಾಗೂ ಕಾಳಿಮಠದ ರಿಷಿಕುಮಾರ ಸ್ವಾಮೀಜಿ ಇಬ್ಬರೂ ಕಾಣಿಸಿಕೊಂಡು ಕಿರುತೆರೆ ವೀಕ್ಷಕರಿಗೆ ಸಖತ್ ಮನರಂಜನೆ ಕೊಟ್ಟಿದ್ದರು. ಈಗ ಬಿಗ್ ಬಾಸ್ 2ಗೆ ಕೇಳಿಬಂದಿರುವ ಸ್ವಾಮೀಜಿ ಹೆಸರು ಬಿಡದಿಯ ನಿತ್ಯಾನಂದ. ['ಬಿಗ್ ಬಾಸ್ 2' ಶೋನಲ್ಲಿ ಇವರೆಲ್ಲಾ ಇರ್ತಾರಾ?]
ಹಲವಾರು ಆರೋಪ, ಅನೇಕ ಅನಿರೀಕ್ಷಿತ ಘಟನೆಗಳ ಕಾರಣ ಸ್ವಾಮಿ ನಿತ್ಯಾನಂದ ಅವರು ವಿವಾದಾಸ್ಪದ ಸ್ವಾಮಿ ಎನ್ನಿಸಿಕೊಂಡಿದ್ದಾರೆ. ಈಗ ಅವರು ಅಷ್ಟೋ ಇಷ್ಟೋ ರಿಲ್ಯಾಕ್ಸ್ ಆಗಲು 'ಬಿಗ್ ಬಾಸ್' ಶೋ ಅವರ ಪಾಲಿಗೆ ಹೇಳಿ ಮಾಡಿಸಿದಂತಿದೆ.
ಬಿಗ್ ಬಾಸ್ 2 ಶೋನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ರಾಗಿಣಿ, ಜಗ್ಗೇಶ್, ರೇಣುಕಾಚಾರ್ಯ, ಪ್ರೇಮಕುಮಾರಿ (ರಾಮದಾಸ್ ಪ್ರಕರಣ), ಮಾಸ್ಟರ್ ಆನಂದ್, ರಾಧಿಕಾ ಕುಮಾರಸ್ವಾಮಿ, ಸುಮನ್ ರಂಗನಾಥ್ ಮುಂತಾದವರ ಹೆಸರುಗಳು ಕೇಳಿಬಂದಿವೆ.