Don't Miss!
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಂದೆಯ ಸುಧೀರ್ ನೆನೆದು ಶಿವಣ್ಣನ ಮುಂದೆ ಕಣ್ಣೀರಿಟ್ಟ ತರುಣ್ ಸುಧೀರ್ !
Recommended Video
ಸ್ಟಾರ್ ಸುವರ್ಣ ಮತ್ತು ವಿಯು ಅಪ್ ನಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದ ಎರಡನೇ ಎರಡನೇ ಸಂಚಿಕೆ ನಿನ್ನೆ ಪ್ರಸಾರ ಆಗಿದೆ. ಎರಡನೇ ಸಂಚಿಕೆಯಲ್ಲಿ ನಟ ಶರಣ್, ಚಿಕ್ಕಣ್ಣ ಮತ್ತು ನಿರ್ದೇಶಕ ತರುಣ್ ಸುಧೀರ್ ಭಾಗಿಯಾಗಿದ್ದರು.
ಶರಣ್, ಚಿಕ್ಕಣ್ಣ, ತರುಣ್ ಸುಧೀರ್ ಅವರ ಸಂಚಿಕೆ ತುಂಬ ನಗು ಇತ್ತು. ಆದರೆ ಕೊನೆಯ ಸುತ್ತಿನಲ್ಲಿ ಶಿವಣ್ಣನ ಒಂದು ಪ್ರಶ್ನೆಗೆ ಉತ್ತರಿಸುತ್ತ ತರುಣ್ ಸುಧೀರ್ ಕಣ್ಣೀರು ಹಾಕಿದರು. ಖ್ಯಾತ ಖಳ ನಟ ಸುಧೀರ್ ಅವರ ಮಗನಾಗಿರುವ ತರುಣ್ ಸುಧೀರ್ ಇಂದು ಒಬ್ಬ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸುಧೀರ್ ಅವರ ಇಬ್ಬರು ಮಕ್ಕಳಾದ ತರುಣ್ ಸುಧೀರ್ ಮತ್ತು ನಂದಕಿಶೋರ್ ಅಪ್ಪನ ಹೆಸರನ್ನು ಉಳಿಸಿದ್ದಾರೆ. ಆದರು ಸಹ ತಂದೆ ಇದ್ದಾಗ ಅವರ ಬೆಲೆ ನಮಗೆ ತಿಳಿಯಲಿಲ್ಲ ಎನ್ನುವ ನೋವು ತರುಣ್ ಅವರಿಗೆ ಇಂದಿಗೂ ಕಾಡುತ್ತಿದೆ. ಮಂದೆ ಓದಿ..
ಇಂದಿನ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಡಾಲಿ, ಚಿಟ್ಟೆ, ಪುನರ್ವಸು
ನಿಮ್ಮ ಜೀವನದ ದೊಡ್ಡ ಮಿಸ್ಟೇಕ್ ಏನು?
'ನಿಮ್ಮ ಜೀವನದ ದೊಡ್ಡ ಮಿಸ್ಟೆಕ್ ಏನು?' ಎಂದು ಶಿವಣ್ಣ ಕಾರ್ಯಕ್ರಮದ ಅತಿಥಿ ಆಗಿದ್ದ ತರುಣ್ ಸುಧೀರ್ ಅವರಿಗೆ ಪ್ರಶ್ನೆಯೊಂದನ್ನು ಕೇಳಿದರು. ಪ್ರಶ್ನೆ ಉತ್ತರಿಸಲು ಶುರು ಮಾಡಿದ ತರುಣ್ ಸುಧೀರ್ ಭಾವುಕರಾದರು.
ತಂದೆ ಇದ್ದಾಗ ಅವರ ಬೆಲೆ ಗೊತ್ತಾಗಲಿಲ್ಲ
''ನಮ್ಮ ತಂದೆ ಇರಬೇಕಾದರೆ ಅವರ ಬೆಲೆ ನಮಗೆ ಗೊತ್ತಿರಲಿಲ್ಲ.'' ಎಂದು ಹೇಳಿ ತರುಣ್ ಮುಂದೆ ಏನು ಮಾತನಾಡಲಾಗದೆ ತಂದೆಯನ್ನು ನೆನೆದು ಕಣ್ಣೀರು ಹಾಕಿದರು.
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಡಿ ಬಾಸ್ ದರ್ಶನ್ ಬರಲೇಬೇಕು!
ಸಮಾದಾನ ಮಾಡಿದ ಶಿವಣ್ಣ
''ನಮಗೂ ಗೊತ್ತು... ನಮಗೆ ಅವರು ತುಂಬ ಹತ್ತಿರ ಆದವರು. ನಾನು ಅವರ ಜೊತೆಗೆ ಸಿನಿಮಾ ಸಹ ಮಾಡಿದ್ದೇನೆ. ಅಪ್ಪಾಜಿಗೆ ಅವರು ಆಪ್ತರಾಗಿ ಇದ್ದರು. ಯಾವಾಗಲೂ ಊಟ ಮಾಡುವಾಗ ಅವರನ್ನು ಕರೆಯುತ್ತಿದ್ದರು. ಅವರು ಈಗ ಇದ್ದಿದ್ದರೆ ನಿಮ್ಮನ್ನು ನೋಡಿ ತುಂಬ ಖುಷಿ ಪಡುತ್ತಿದ್ದರು'' ಎಂದು ತರುಣ್ ರನ್ನು ಶಿವಣ್ಣ ಸಮಾದಾನ ಮಾಡಿದರು.
ನಮಗೂ ಹಾಗೆ ಆಗಿದೆ
''ಆಗ ಹುಡುಗಾಟದಲ್ಲಿ ಏನೋ ಮಾಡಿರುತ್ತೇವೆ. ನಮಗೂ ಹಾಗೆ ಆಗಿದೆ. ಆದರೆ ಬರ್ತಾ ಬರ್ತಾ ಅವರ ಬೆಲೆ ಗೊತ್ತಾಯಿತು.' ಎಂದು ಹೇಳಿ ಶಿವರಾಜ್ ಕುಮಾರ್ ತಮ್ಮ ತಂದೆ ರಾಜ್ ಕುಮಾರ್ ಅವರನ್ನು ನೆನೆದರು.
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಆಗಮಿಸಲಿರುವ ಸ್ಟಾರ್ ಗಳ ಪಟ್ಟಿ
ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು
ನಂತರ ''ನೀವು ಸಾಯುವುದಕ್ಕೂ ಮುಂಚೆ ಏನನ್ನು ಸಾಧಿಸಬೇಕು.?'' ಎಂಧು ಶಿವಣ್ಣ ಮತ್ತೆ ಒಂದು ಪ್ರಶ್ನೆ ಕೇಳಿದರು. ಆಗ ತರುಣ್ ''ಸಿನಿಮಾ ಬಗ್ಗೆ ಅಲ್ಲ. ವೈಯಕ್ತಿಕವಾಗಿ ಅಂದರೆ ನನಗೆ ಒಂದೇ ಒಂದು ಆಸೆ ಇದೆ. ನಾನು ಇರುವಷ್ಟು ದಿನ ಯಾವುದೇ ಕಷ್ಟ ಆಗದಂತೆ ನಮ್ಮ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಅಷ್ಟೇ.'' ಎಂದು ಹೇಳಿದರು. ಆ ಕ್ಷಣ ನಿಜಕ್ಕೂ ಇಡೀ ಸ್ಟೂಡಿಯೊದಲ್ಲಿ ಭಾವುಕತೆ ಮೂಡಿತು.