Don't Miss!
- News
ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಹೋಗಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Sports
WIPL 2023: ಮಹಿಳಾ ಐಪಿಎಲ್ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಉದಯ ಟಿವಿಯಲ್ಲಿ ಆರಂಭ ಆಗಲಿದೆ ಹೊಸ ಶೋ 'ತುತ್ತಾ ಮುತ್ತಾ'
ಕರ್ನಾಟಕದ ಹೆಮ್ಮೆಯ ವಾಹಿನಿಯಾದ ಉದಯ ಟಿವಿಯು ಹೊಸದೊಂದು ಕಾರ್ಯಕ್ರಮವನ್ನು ಜನತೆಗೆ ಪರಿಚಯಿಸಲು ಸಜ್ಜಾಗಿದೆ. ಉದಯ ವಾಹಿನಿಯ ಹತ್ತಾರು ಕ್ರಿಯಾಶೀಲ ರಿಯಾಲಿಟಿ ಶೋಗಳ ಪಟ್ಟಿಗೆ 'ತುತ್ತಾ ಮುತ್ತಾ' ಕಾರ್ಯಕ್ರಮ ಸೇರ್ಪಡೆಯಾಗಲಿದೆ.
ತನ್ನ ಮಾತಿನಿಂದಲೇ ನಗುವಿನ ಹೊಳೆ ಹರಿಸುವ ನಿರಂಜನ್ ದೇಶಪಾಂಡೆ ನಿರೂಪಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮನರಂಜನೆಯೇ ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಸವಾಲು ಜವಾಬುಗಳ ಜುಗಲ್ಬಂದಿಯಾಗಿ ತೆರೆಯ ಮೇಲೆ ಇದೊಂದು ಹೊಸ ರೀತಿಯ, ವಿನೂತನ ರಿಯಾಲಿಟಿ ಶೋ ಆಗಿ ಮೂಡಿಬರಲಿದೆ.
ಕಾರ್ಯಕ್ರಮದಲ್ಲಿ ಹಿರಿತೆರೆ ಮತ್ತು ಕಿರುತೆರೆಯ ತಾರೆಯರ ದಂಡು ಭಾಗವಹಿಸಲಿದ್ದಾರೆ. ತಾರೆಯರ ಮಡದಿ ಮತ್ತು ತಾಯಂದಿರ ನಡುವೆ ನಡೆಯುವ ಜಟಾಪಟಿಯೇ 'ತುತ್ತಾ ಮುತ್ತಾ'. ಮುಂದೆ ಓದಿರಿ...

ಐದು ಲಕ್ಷ ಗೆಲ್ಲುವ ಅವಕಾಶ
ಆಟದಲ್ಲಿ ತಾರೆಯರ ತಾಯಿ ಒಂದು ಕಡೆ, ಹೆಂಡತಿ ಒಂದು ಕಡೆ ನಿಂತು ನಿರಂಜನ್ ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರೆ. ಹನ್ನೆರಡು ಪ್ರಶ್ನೆಗಳಿಂದ ಐದು ಲಕ್ಷ ಗೆಲ್ಲುವ ಅವಕಾಶ ಇವರಿಗೆ ಇರುತ್ತದೆ. ಇದರಲ್ಲಿ ಸರಿಯಾಗಿ ಉತ್ತರ ಕೊಡುವವರು ಯಾರು ಎಂಬ ಆಯ್ಕೆ ಮಾತ್ರ ಬಂದ ತಾರೆಯರದ್ದು.
ಮತ್ತೊಂದು
ಪೌರಾಣಿಕ
ಧಾರಾವಾಹಿ
ಶುರು:
ಉದಯ
ಟಿವಿಯಲ್ಲಿ
'ಜೈ
ಹನುಮಾನ್'

ಸಂಬಂಧಗಳ ಮುಕ್ತ ಚರ್ಚೆ
ಉತ್ತರ ತಪ್ಪಾದಲ್ಲಿ ಬರೀ ಒಂದು ಕಡೆಯಿಂದ ಮಾತ್ರವಲ್ಲದೆ, ಆರೋಹಣ ಮತ್ತು ಅವರೋಹಣದ ಕ್ರಮದಲ್ಲಿ ಹಣ ಕಡಿತವಾಗುತ್ತಾ ಬರುತ್ತದೆ. ತಾಯಿ, ಮಗ, ಸೊಸೆಯ ನಡುವಿನ ಬಾಂಧವ್ಯ, ಸಂಬಂಧಗಳ ಮುಕ್ತ ಚರ್ಚೆ ಹಾಗು ಪ್ರಶ್ನೆಗಳಿಗೆ ಉತ್ತರ ಕೊಡುವ ರೋಚಕತೆಯೇ ಈ 'ತುತ್ತಾ ಮುತ್ತಾ'
'ಸೀರಿಯಲ್
ಹಬ್ಬ':
'ಮಾನಸ
ಸರೋವರ'
ಮತ್ತು
'ಅವಳು'
ತಂಡದಿಂದ
ಮಸ್ತ್
ಮನರಂಜನೆ

ಮನರಂಜನೆ ಅನಿಯಮಿತ
ವಾರಾಂತ್ಯದಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಜನಕ್ಕೆ ತಮ್ಮ ನೆಚ್ಚಿನ ತಾರೆಯರ ಪರಿಚಯ ಮತ್ತಷ್ಟು ಹತ್ತಿರದಿಂದ ಆಗುವುದರಲ್ಲಿ ಅನುಮಾನವೇ ಇಲ್ಲ. ಹಾಗೆ ಮಸ್ತಿ ಮತ್ತು ಮನರಂಜನೆ ಅನಿಯಮಿತವಾಗಿ ದೊರೆಯಲಿದೆ.
350ನೇ
ಸಂಚಿಕೆ
ಸಂಭ್ರಮ:
ಹೊಸ
ರೂಪದಲ್ಲಿ
'ಅವಳು'

ಕುರಿ ಪ್ರತಾಪ್ ಕುಟುಂಬ
ಈ ಶೋನಲ್ಲಿ ವಿಧವಿಧವಾದ ಸವಾಲುಗಳನ್ನು ಹಾಕಲಾಗುತ್ತದೆ. ಇದನ್ನೆಲ್ಲಾ ಉತ್ತರಿಸಲು ಸಿನಿಮಾ ಮತ್ತು ಸಣ್ಣಪರದೆಯ ತಾರೆಯರು ಬರುತ್ತಾರೆ. ಸಂಗೀತ ನಿರ್ದೇಶಕ ಗುರುಕಿರಣ್, ಹಾಸ್ಯ ನಟ ಕುರಿ ಪ್ರತಾಪ್ ಈಗಾಗಲೇ ಈ ಆಟದಲ್ಲಿ ಭಾಗವಹಿಸಿರುವ ತಾರೆಯರು.
ಉದಯ
ಟಿವಿಯಲ್ಲಿ
ಪಕ್ಕಾ
ಮನರಂಜನೆಯ
ಶೋ
'ಸವಾಲ್
ಗೆ
ಸೈ'

ಹಾಸ್ಯ ಸಾಗರ
ಗುರುಕಿರಣ್ ಅವರ ತಾಯಿಯ ಮುಗ್ಧತೆ, ಮಡದಿಯ ಮುದ್ದು ಮಾತುಗಳು, ಗುರುಕಿರಣ್ ರ ಹಾಡುಗಳು ಆ ಕಂತಿನ ವಿಶೇಷತೆಯಾದರೆ, ಕುರಿ ಪ್ರತಾಪ್ ರ ಸಂಚಿಕೆ, ಹಾಸ್ಯ ಸಾಗರವನ್ನೇ ಸುರಿಸುವುದರಲ್ಲಿ ಅನುಮಾನವೇ ಇಲ್ಲ. 'ತುತ್ತಾ ಮುತ್ತಾ' ಇದೇ ಶನಿವಾರದಿಂದ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.