Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ಟಿವಿಯಲ್ಲಿ ಆರಂಭ ಆಗಲಿದೆ ಹೊಸ ಶೋ 'ತುತ್ತಾ ಮುತ್ತಾ'
ಕರ್ನಾಟಕದ ಹೆಮ್ಮೆಯ ವಾಹಿನಿಯಾದ ಉದಯ ಟಿವಿಯು ಹೊಸದೊಂದು ಕಾರ್ಯಕ್ರಮವನ್ನು ಜನತೆಗೆ ಪರಿಚಯಿಸಲು ಸಜ್ಜಾಗಿದೆ. ಉದಯ ವಾಹಿನಿಯ ಹತ್ತಾರು ಕ್ರಿಯಾಶೀಲ ರಿಯಾಲಿಟಿ ಶೋಗಳ ಪಟ್ಟಿಗೆ 'ತುತ್ತಾ ಮುತ್ತಾ' ಕಾರ್ಯಕ್ರಮ ಸೇರ್ಪಡೆಯಾಗಲಿದೆ.
ತನ್ನ ಮಾತಿನಿಂದಲೇ ನಗುವಿನ ಹೊಳೆ ಹರಿಸುವ ನಿರಂಜನ್ ದೇಶಪಾಂಡೆ ನಿರೂಪಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮನರಂಜನೆಯೇ ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಸವಾಲು ಜವಾಬುಗಳ ಜುಗಲ್ಬಂದಿಯಾಗಿ ತೆರೆಯ ಮೇಲೆ ಇದೊಂದು ಹೊಸ ರೀತಿಯ, ವಿನೂತನ ರಿಯಾಲಿಟಿ ಶೋ ಆಗಿ ಮೂಡಿಬರಲಿದೆ.
ಕಾರ್ಯಕ್ರಮದಲ್ಲಿ ಹಿರಿತೆರೆ ಮತ್ತು ಕಿರುತೆರೆಯ ತಾರೆಯರ ದಂಡು ಭಾಗವಹಿಸಲಿದ್ದಾರೆ. ತಾರೆಯರ ಮಡದಿ ಮತ್ತು ತಾಯಂದಿರ ನಡುವೆ ನಡೆಯುವ ಜಟಾಪಟಿಯೇ 'ತುತ್ತಾ ಮುತ್ತಾ'. ಮುಂದೆ ಓದಿರಿ...
ಐದು ಲಕ್ಷ ಗೆಲ್ಲುವ ಅವಕಾಶ
ಆಟದಲ್ಲಿ ತಾರೆಯರ ತಾಯಿ ಒಂದು ಕಡೆ, ಹೆಂಡತಿ ಒಂದು ಕಡೆ ನಿಂತು ನಿರಂಜನ್ ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರೆ. ಹನ್ನೆರಡು ಪ್ರಶ್ನೆಗಳಿಂದ ಐದು ಲಕ್ಷ ಗೆಲ್ಲುವ ಅವಕಾಶ ಇವರಿಗೆ ಇರುತ್ತದೆ. ಇದರಲ್ಲಿ ಸರಿಯಾಗಿ ಉತ್ತರ ಕೊಡುವವರು ಯಾರು ಎಂಬ ಆಯ್ಕೆ ಮಾತ್ರ ಬಂದ ತಾರೆಯರದ್ದು.
ಮತ್ತೊಂದು ಪೌರಾಣಿಕ ಧಾರಾವಾಹಿ ಶುರು: ಉದಯ ಟಿವಿಯಲ್ಲಿ 'ಜೈ ಹನುಮಾನ್'
ಸಂಬಂಧಗಳ ಮುಕ್ತ ಚರ್ಚೆ
ಉತ್ತರ ತಪ್ಪಾದಲ್ಲಿ ಬರೀ ಒಂದು ಕಡೆಯಿಂದ ಮಾತ್ರವಲ್ಲದೆ, ಆರೋಹಣ ಮತ್ತು ಅವರೋಹಣದ ಕ್ರಮದಲ್ಲಿ ಹಣ ಕಡಿತವಾಗುತ್ತಾ ಬರುತ್ತದೆ. ತಾಯಿ, ಮಗ, ಸೊಸೆಯ ನಡುವಿನ ಬಾಂಧವ್ಯ, ಸಂಬಂಧಗಳ ಮುಕ್ತ ಚರ್ಚೆ ಹಾಗು ಪ್ರಶ್ನೆಗಳಿಗೆ ಉತ್ತರ ಕೊಡುವ ರೋಚಕತೆಯೇ ಈ 'ತುತ್ತಾ ಮುತ್ತಾ'
'ಸೀರಿಯಲ್ ಹಬ್ಬ': 'ಮಾನಸ ಸರೋವರ' ಮತ್ತು 'ಅವಳು' ತಂಡದಿಂದ ಮಸ್ತ್ ಮನರಂಜನೆ
ಮನರಂಜನೆ ಅನಿಯಮಿತ
ವಾರಾಂತ್ಯದಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಜನಕ್ಕೆ ತಮ್ಮ ನೆಚ್ಚಿನ ತಾರೆಯರ ಪರಿಚಯ ಮತ್ತಷ್ಟು ಹತ್ತಿರದಿಂದ ಆಗುವುದರಲ್ಲಿ ಅನುಮಾನವೇ ಇಲ್ಲ. ಹಾಗೆ ಮಸ್ತಿ ಮತ್ತು ಮನರಂಜನೆ ಅನಿಯಮಿತವಾಗಿ ದೊರೆಯಲಿದೆ.
350ನೇ ಸಂಚಿಕೆ ಸಂಭ್ರಮ: ಹೊಸ ರೂಪದಲ್ಲಿ 'ಅವಳು'
ಕುರಿ ಪ್ರತಾಪ್ ಕುಟುಂಬ
ಈ ಶೋನಲ್ಲಿ ವಿಧವಿಧವಾದ ಸವಾಲುಗಳನ್ನು ಹಾಕಲಾಗುತ್ತದೆ. ಇದನ್ನೆಲ್ಲಾ ಉತ್ತರಿಸಲು ಸಿನಿಮಾ ಮತ್ತು ಸಣ್ಣಪರದೆಯ ತಾರೆಯರು ಬರುತ್ತಾರೆ. ಸಂಗೀತ ನಿರ್ದೇಶಕ ಗುರುಕಿರಣ್, ಹಾಸ್ಯ ನಟ ಕುರಿ ಪ್ರತಾಪ್ ಈಗಾಗಲೇ ಈ ಆಟದಲ್ಲಿ ಭಾಗವಹಿಸಿರುವ ತಾರೆಯರು.
ಉದಯ ಟಿವಿಯಲ್ಲಿ ಪಕ್ಕಾ ಮನರಂಜನೆಯ ಶೋ 'ಸವಾಲ್ ಗೆ ಸೈ'
ಹಾಸ್ಯ ಸಾಗರ
ಗುರುಕಿರಣ್ ಅವರ ತಾಯಿಯ ಮುಗ್ಧತೆ, ಮಡದಿಯ ಮುದ್ದು ಮಾತುಗಳು, ಗುರುಕಿರಣ್ ರ ಹಾಡುಗಳು ಆ ಕಂತಿನ ವಿಶೇಷತೆಯಾದರೆ, ಕುರಿ ಪ್ರತಾಪ್ ರ ಸಂಚಿಕೆ, ಹಾಸ್ಯ ಸಾಗರವನ್ನೇ ಸುರಿಸುವುದರಲ್ಲಿ ಅನುಮಾನವೇ ಇಲ್ಲ. 'ತುತ್ತಾ ಮುತ್ತಾ' ಇದೇ ಶನಿವಾರದಿಂದ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.