Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆ ನಟ ಅನಿರುದ್ಧ್ ಆರೋಗ್ಯ ಸ್ಥಿತಿ ಗಂಭೀರ: ಶೀಘ್ರ ಚೇತರಿಕೆಗೆ ಹಾರೈಸಿ ಎಂದ ಪತ್ನಿ
ಹಿಂದಿ ಕಿರುತೆರೆಯ ಖ್ಯಾತ ನಟ ಅನಿರುದ್ಧ್ ದೇವ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪತಿ ಶೀಘ್ರ ಚೇತರಿಕೆ ಹಾರೈಸಿ ಎಂದು ಪತ್ನಿ ಶುಭಿ ಅಹುಜಾ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪತಿ ಅನುರುದ್ಧ್ ಭೋಪಾಲ್ ಆಸ್ಪತ್ರೆಗೆ ಅನಿರುದ್ಧ ದಾಖಲಾಗಿದ್ದು, ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆಂದು ಅಹುಜಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ನಾನು ನನ್ನ 2 ತಿಂಗಳ ಮಗುವನ್ನು ಮನೆಯಲ್ಲೇ ಬಿಟ್ಟು ನಾನು ನನ್ನ ಗಂಡನನ್ನು ನೋಡಲು ಹೋಗುತ್ತಿದ್ದೀನಿ. ಇದು ನನ್ನ ದೊಡ್ಡ ಸವಾಲು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.
ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿದ ನಟನಿಗೆ 2 ಲಕ್ಷ ರೂ.ದಂಡ
ಒಂದು ಕಡೆ ಆಸ್ಪತ್ರೆಯಲ್ಲಿ ಕೊರೊನಾದಿಂದ ಬಳಲುತ್ತಿರುವ ನನ್ನ ಪತ್ನಿಯ ಪಾಲಿನೆ ಮುಖ್ಯವಾದರೆ, ಇನ್ನೊಂದೆಡೆ 2 ತಿಂಗಳ ಮಗುವಿನ ಪೋಷಣೆಯನ್ನು ಮಾಡಬೇಕಿದೆ. ಇದು ನನ್ನ ಜೀವನದ ಅತಿ ದೊಡ್ಡ ಸವಾಲಿನ ಕೆಲಸವಾಗಿದೆ. ದಯವಿಟ್ಟು ನನ್ನ ಪತಿಯ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಈ ಸಮಯದಲ್ಲಿ ನನ್ನ ಪತಿಗೆ ಇದು ಮುಖ್ಯವಾಗಿದೆ.
'ಅನಿರುದ್ಧ ಅವರನ್ನು ಇನ್ನು ಎರಡು ದಿನಗಳು ವೀಕ್ಷಣೆಯಲ್ಲಿಟ್ಟಿದ್ದಾರೆ. ದಯವಿಟ್ಟು ಎಲ್ಲರೂ ಪ್ರಾರ್ಥಿಸುತ್ತೀರಿ' ಎಂದು ಹೇಳಿದ್ದಾರೆ. ಅನಿರುದ್ಧ್ ಬೇಗ ಗುಣಮುಖರಾಗಲಿ ಎಂದು ಕಿರುತೆರೆ ಕಲಾವಿದರು ಮತ್ತು ಅಭಿಮಾನಿಗಳು ಹಾರೈಸುತ್ತಿದ್ದಾರೆ.