Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ವಾಹಿನಿಯಲ್ಲಿ ಹೊಸ ರಿಯಾಲಿಟಿ ಶೋ
ಪ್ರಣಯರಾಜ ಶ್ರೀನಾಥ್ ಈ ಶೋ ನಿರೂಪಕರು. ವಿಕಲಚೇತನರಲ್ಲಿನ ಅಪ್ಪಟ ಪ್ರತಿಭೆಯನ್ನು ಗುರುತಿಸುವುದೇ ಈ ಶೋನ ವಿಶೇಷ. ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತದೆ. ಕೇವಲ ಕರ್ನಾಟಕದಲ್ಲಿ ನೆಲೆಸಿರುವವರಷ್ಟೇ ಅಲ್ಲ. ಜಗತ್ತಿನಾದ್ಯಂತ ನೆಲೆಸಿರುವ ವಿಕಲಚೇತನ ಕನ್ನಡಿಗರು ಈ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.
ಈಗಾಗಲೆ ಆಡಿಷನ್ ಆರಂಭವಾಗಿದ್ದು ಜೂನ್ ತಿಂಗಳಲ್ಲಿ ಈ ರಿಯಾಲಿಟಿ ಶೋ ಆರಂಭವಾಗಲಿದೆ. ವಿಕಲಚೇತನರಲ್ಲಿ ಹೊಸ ಚೈತನ್ಯ ತುಂಬುವುದೇ ಈ ರಿಯಾಲಿಟಿ ಶೋನ ಉದ್ದೇಶ ಎನ್ನುತ್ತವೆ ವಾಹಿನಿ ಮೂಲಗಳು.
ಈ ಹಿಂದೆ ಉದಯ ವಾಹಿನಿಯಲ್ಲಿ ಹಲವಾರು ರಿಯಾಲಿಟಿ ಶೋಗಳು ಮೂಡಿಬಂದಿದ್ದವು. "ಕೈಯಲ್ಲಿ ಕೋಟಿ ಹೇಳ್ಬಿಟ್ಟು ಹೋಡೀರಿ" ಕಾರ್ಯಕ್ರಮವನ್ನು ಜಗ್ಗೇಶ್ ನಡೆಸಿಕೊಟ್ಟಿದ್ದಾರೆ. ಈಗ 'ಉದಯ ಸಿಂಗರ್' ಎಂಬ ರಿಯಾಲಿಟಿ ಶೋ ಮೂಡಿಬರುತ್ತಿದೆ. ಈಗ ಮತ್ತೊಂದು ಅಪರೂಪದ ರಿಯಾಲಿಟಿ ಶೋಗೆ ಉದಯ ವಾಹಿನಿ ತಯಾರಾಗುತ್ತಿದೆ.
ಇನ್ನೊಂದು ಕಡೆ ಸುವರ್ಣ ವಾಹಿನಿಯ 'ಕನ್ನಡದ ಕೋಟ್ಯಾಧಿಪತಿ' ಹಾಗೂ ಈಟಿವಿ ಕನ್ನಡದ 'ಬಿಗ್ ಬಾಸ್' ರಿಯಾಲಿಟಿ ಶೋಗಳಿಗೆ ಪೈಪೋಟಿ ನೀಡುವಂತಹ ಶೋಗಳು ಬೇರೆ ಮನರಂಜನಾ ವಾಹಿನಿಗಳಲ್ಲಿ ಇಲ್ಲದಿರುವುದು ವಾಹಿನಿಗಳ ನಡುವೆ ಅಗಾದ ಕಂದಕವನ್ನು ಸೃಷ್ಟಿಸಿವೆ. (ಏಜೆನ್ಸೀಸ್)