Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈ 10 ರಿಂದ ಉದಯ ಟಿವಿಯಲ್ಲಿ 'ಜ್ಯೋತಿ' ಧಾರಾವಾಹಿ ಪ್ರಸಾರ
ದಕ್ಷಿಣ ಭಾರತದ ಖ್ಯಾತ ಮನರಂಜನೆ ವಾಹಿನಿ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ಪ್ರಸಾರವಾಗುತ್ತಿದೆ. ಉದಯ ಟಿವಿಯಲ್ಲಿ ಜುಲೈ 10 ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರೋಚಕವಾದ ಕಥೆಯುಳ್ಳ 'ಜ್ಯೋತಿ' ಧಾರಾವಾಹಿ ಪ್ರಸಾರವಾಗಲಿದೆ.
ಇದೊಂದು ಕಾಲ್ಪನಿಕ ಕಥೆಯಾಧರಿಸಿ ತಯಾರಾಗಿದ್ದು, ಬಹಳ ರೋಚಕತೆಯಿಂದ ಕೂಡಿದೆ ಎನ್ನುವುದು ವಿಶೇಷ. ಗ್ರಾಫಿಕ್ಸ್ಗೆ ಹೆಚ್ಚು ಒತ್ತು ನೀಡಲಾಗಿದ್ದು, ತೆರೆಮೇಲೆ ಬಹಳ ಅದ್ಭುತವಾಗಿ ಮೂಡಿ ಬಂದಿದೆ.
ಒಂದೊಳ್ಳೆ ಕೆಲಸಕ್ಕೆ ತಲೆ ಕೂದಲು ದಾನ ಮಾಡಿದ ನಿರೂಪಕಿ ಕಾವ್ಯ ಶಾಸ್ತ್ರಿ
ಜ್ಯೋತಿ ಧಾರಾವಾಹಿಯಲ್ಲಿ ಸಿನಿಮಾ ನಟಿ ಮೇಘಶ್ರೀ ನಾಯಕಿ ಪಾತ್ರವನ್ನು ನಿರ್ವಹಿಸಿದ್ದಾರೆ. ಇದರ ಜೊತೆಗೆ ಸೀಮಾ, ಸುಜಾತ, ನೀಲಾ ಮೇನನ್ ಹಾಗೂ ರಮೇಶ್ ಪಂಡಿತ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ತನ್ನ ರೂಪ ಬದಲಿಸುವ ನಾಗಕನ್ಯೆಯ ಶಕ್ತಿಯ ಅರಿವಿಲ್ಲದೆ ಹಾಗೂ ನಾಗಲೋಕದ ಒಬ್ಬಳೆ ವಾರಸದಾರಳು ಎಂಬ ಸತ್ಯ ಗೊತ್ತಿಲ್ಲದೆ 'ಜ್ಯೋತಿ' ನಾಗಲೋಕದ ಅರಮನೆಯಲ್ಲಿ ಕೆಲಸದವಳಾಗಿ ಕಾರ್ಯ ನಿರ್ವಹಿಸುತ್ತಾಳೆ. ತನ್ನ ಕುಟುಂಬದಿಂದ ಹಾಗೂ ಬೇರೆ ಕ್ಷುದ್ರ ಶಕ್ತಿಗಳಿಂದ ಕಷ್ಟಗಳನ್ನ ಅನುಭವಿಸುತ್ತಾಳೆ. ಅವಳು ಹೇಗೆ ಈ ಎಲ್ಲ ಶಕ್ತಿಗಳನ್ನ ಸೋಲಿಸಿ ತಾನು ಪ್ರೀತಿಸಿದ ಹುಡುಗನನ್ನು ಹಾಗೂ ನಾಗಲೋಕದ 'ನಾಗಮಾಣಿಕ್ಯ'ವನ್ನು ಪಡೆಯುತ್ತಾಳೆ ಎಂಬುದೇ ಜ್ಯೋತಿ ಧಾರಾವಾಹಿಯ ಕಥೆ.
'ಜ್ಯೋತಿ' ಜುಲೈ 10 ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9.30ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.