Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಅಭಿಮಾನಿಗಳೇ ಸಂಕ್ರಾಂತಿಯಂದು ಉದಯ ಟಿವಿ ತಪ್ಪದೆ ನೋಡಿ
ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'Mr.ಐರಾವತ' ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಮೊಟ್ಟ ಮೊದಲ ಬಾರಿಗೆ ಕಿರುತೆರೆಯಲ್ಲಿ ಮೂಡಿಬರಲಿದೆ. ನಟ ದರ್ಶನ್ ಅವರು ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ 'Mr.ಐರಾವತ' ಸೂಪರ್ ಹಿಟ್ ಆಗಿತ್ತು.
ಸಂದೇಶ್ ನಾಗರಾಜ್ ನಿರ್ಮಾಣದ ಎ.ಪಿ. ಅರ್ಜುನ್ ನಿರ್ದೇಶನ ಮಾಡಿರುವ 'Mr.ಐರಾವತ' ಸಿನಿಮಾ ನಿರ್ಮಾಣ ಹಂತದಿಂದ ಹಿಡಿದು ಬಿಡುಗಡೆಯವರೆಗೂ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿತ್ತು.[ಚಿತ್ರ ವಿಮರ್ಶೆ : 'ಸುಂಟರಗಾಳಿ' ಬೀಸಿದ ದರ್ಶನ್ 'Mr.ಐರಾವತ']
ಅಂದಹಾಗೆ ನಟ ದರ್ಶನ್ ಪುತ್ರ ವಿನೀಶ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಬಹಳ ದಿನಗಳ ನಂತರ ತೆರೆ ಮೇಲೆ ಖಾಕಿ ತೊಟ್ಟು ಪೊಲೀಸ್ ಅಧಿಕಾರಿಯಾಗಿ ದರ್ಶನ್ ಕಾಣಿಸಿಕೊಂಡಿದ್ದು, ಹಾಡು, ಡೈಲಾಗ್, ಫೈಟ್ಸ್ ಅಭಿಮಾನಿಗಳಿಗೆ ರಸದೌತಣ ನೀಡಿದ್ದರಿಂದ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು.[ಕಲೆಕ್ಷನ್ ನಲ್ಲಿ ಚಿಂದಿ ಉಡಾಯಿಸಿದ ದರ್ಶನ್ 'Mr.ಐರಾವತ']
ಮಾತ್ರವಲ್ಲದೇ, ಗಳಿಕೆಯಲ್ಲೂ ದಾಖಲೆ ಬರೆದಿದ್ದ 'Mr.ಐರಾವತ' ಮತ್ತೊಮ್ಮೆ ನಟ ದರ್ಶನ್ ಅವರಿಗೆ ಬಾಕ್ಸ್ ಆಫೀಸ್ ಸುಲ್ತಾನ್ ಎಂಬುದನ್ನು ಸಾಬೀತು ಪಡಿಸಿತ್ತು.
Sankranti
Specie..@MrAiravata
pic.twitter.com/Mh8xJLSwA7
—
AP
Arjun
Films
(@AP_Arjun_film)
January
9,
2016
ಇದೀಗ ಸಂಕ್ರಾಂತಿ ಹಬ್ಬದ ಪ್ರಯುಕ್ತ 'Mr.ಐರಾವತ' ಕಿರುತೆರೆಯಲ್ಲಿ ಪ್ರದರ್ಶನ ಕಾಣಲಿದ್ದು, 'ಜನವರಿ 15 ರಂದು ಸಂಜೆ 7 ಗಂಟೆಗೆ ಉದಯ ಟಿವಿಯಲ್ಲಿ' 'Mr.ಐರಾವತ'ನ ದರ್ಶನವಾಗಲಿದೆ. ಯಾರಾದ್ರೂ ಬೆಳ್ಳಿತೆರೆಯ ಮೇಲೆಯ ಈ ಸಿನಿಮಾ ಮಿಸ್ ಮಾಡ್ಕೊಂಡಿದ್ದಲ್ಲಿ ಈ ಬಾರಿ ಮಾತ್ರ ಮಿಸ್ ಮಾಡ್ಬೇಡಿ.