Don't Miss!
- News ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ: ಒಂದು ಟ್ವೀಟ್ಗೆ ಸಿಎಂ ಜವಾಬ್ದಾರಿ ಮುಗಿಯಿತೇ?: ಮಾಜಿ ಸಿಎಂ
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
50 ಸಂಚಿಕೆಗಳನ್ನು ಪೂರೈಸಿದ ಉದಯ ವಾಹಿನಿಯ 'ಮಾನಸ ಸರೋವರ'
ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ 'ಮಾನಸ ಸರೋವರ' ಧಾರಾವಾಹಿ 50 ಸಂಚಿಕೆಗಳನ್ನು ಪೂರೈಸಿದೆ. ದಿವಂಗತ ಪುಟ್ಟಣ್ಣ ಕಣಗಾಲ್ ರ ಶ್ರೇಷ್ಠ ಚಿತ್ರಗಳಲ್ಲೊಂದಾದ 'ಮಾನಸ ಸರೋವರ'ದ ಮುಂದುವರೆದ ಕಥೆಯಾಗಿ ಶುರುವಾದ ಈ ಧಾರಾವಾಹಿ ಎಲ್ಲರ ಮನ ಗೆದ್ದಿರುವುದಂತೂ ನಿಜ.
ವಾಸಂತಿ ಮತ್ತು ಸಂತೋಷ್ ಗೆ ಸುನಿಧಿ ಮತ್ತು ಶರಧಿ ಅಂತ ಇಬ್ಬರು ಮುದ್ದಾದ ಮಕ್ಕಳು. ಅದರಲ್ಲಿ ಸುನಿಧಿ ಸೈಕ್ಯಾಟ್ರಿಸ್ಟ್. ಮಗಳ ಈ ಮಾನಸಿಕ ವೈದ್ಯ ವೃತ್ತಿ ಇಷ್ಟವಿರದಿದ್ದರೂ ವಾಸಂತಿ ಮಗಳಿಗಾಗಿ ಅವಳ ಕನಸಿಗಾಗಿ ಸಹಿಸಿಕೊಂಡಿದ್ದಾಳೆ.
ಇನ್ನು ಶರಧಿ ಹಠಮಾರಿ. ಸುನಿಧಿ ತನ್ನ ಕೆರಿಯರ್ ನ 'ಮಾನಸ ಸರೋವರ' ಆಸ್ಪತ್ರೆಯಲ್ಲಿ ಶುರುವಿಟ್ಟಿದ್ದಾಳೆ. ಹಿಂದೆ ವಾಸಂತಿಯನ್ನು ಕಳೆದುಕೊಂಡು ಹುಚ್ಚನಾಗಿದ್ದ ಡಾ||ಆನಂದ್ ಕೂಡ ಅದೇ ಆಸ್ಪತ್ರೆಯಲ್ಲಿ ಶುಶ್ರೂಷೆ ಪಡೆಯುತ್ತಿದ್ದಾರೆ. ಆನಂದ್ ಈ ಸ್ಥಿತಿ ಕಂಡು ಹೇಗಾದರೂ ಅವರನ್ನು ಮೊದಲಿನ ಡಾ|| ಆನಂದ್ ಆಗಿ ಮಾಡುವೆ ಎಂದು ಶಪಥ ಮಾಡುವ ಸುನಿಧಿಗೆ ತನ್ನ ತಾಯಿಯೇ ಆನಂದನ ಈ ಸ್ಥಿತಿಗೆ ಕಾರಣ ಅನ್ನೋ ಸತ್ಯ ಗೊತ್ತಾಗುತ್ತಾ?
ಪ್ರಸಿದ್ಧ ಚಲನಚಿತ್ರ 'ಮಾನಸ ಸರೋವರ' ಈಗ ಕಿರುತರೆ ಧಾರಾವಾಹಿ
ಹೀಗೆ ಪ್ರತಿ ಸಂಚಿಕೆಯಲ್ಲೂ ರೋಚಕ ತಿರುವುಗಳನ್ನೊಳಗೊಂಡಿದೆ ಈ 'ಮಾನಸ ಸರೋವರ'. ಹಲವು ಹಿರಿಯ ಕಿರಿಯ ಕಲಾವಿದರ ಮಹಾಸಂಗಮ ಈ ಧಾರಾವಾಹಿಯ ವಿಶೇಷ. ಶ್ರೀನಾಥ್, ರಾಮಕೃಷ್ಣ, ಪದ್ಮ ವಾಸಂತಿ, ಶಿಲ್ಪ, ಪ್ರಜ್ವಲ್, ಶೃತಿ, ಯಮುನಾ, ಶ್ರೀನಿಧಿ ಹೀಗೆ ಪ್ರತಿಭಾನ್ವಿತ ಕಲಾವಿದರ ದಂಡೇ ಇದೆ.
ಇದೆಲ್ಲದ್ದಕ್ಕೂ ಕಲಶಪ್ರಾಯವೆಂಬಂತೆ ಡಾ||ಶಿವರಾಜ್ ಕುಮಾರ್ ಈ ಧಾರಾವಾಹಿಯ ನಿರ್ಮಾಪಕ. ಮುತ್ತು ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಬರುತ್ತಿರುವ 'ಮಾನಸ ಸರೋವರ'ದ ಪ್ರತಿ ರೆಡ್ ಎಪಿಕ್ ಅನ್ನುವ ಸಿನಿಮಾ ಕ್ಯಾಮರಾದಲ್ಲಿ ಚಿತ್ರಿಸಿದ್ದು.
ಒಟ್ಟಾರೆಯಾಗಿ 50 ಸಂಚಿಕೆಗಳನ್ನು ಪೂರೈಸಿ ಮನಸೂರೆಗೊಂಡಿರುವ 'ಮಾನಸ ಸರೋವರ'ದಲ್ಲಿ ವೀಕ್ಷಕರು ಮಿಂದಿರುವುದು ಅದರ ಯಶಸ್ಸಿಗೆ ಹಿಡಿದಿರುವ ಕನ್ನಡಿ. ಸೋಮವಾರದಿಂದ ಶುಕ್ರವಾರ ಪ್ರತಿ ರಾತ್ರಿ 9:30ಕ್ಕೆ ನಿಮ್ಮ ಉದಯ ಟಿವಿಯಲ್ಲಿ 'ಮಾನಸ ಸರೋವರ' ಪ್ರಸಾರ ಆಗುತ್ತಿದೆ.