Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮಿತಾಬ್ ಬಚ್ಚನ್ 'ಕೌನ್ ಬನೇಗಾ ಕರೋಡ್ ಪತಿ'ಶೋನಲ್ಲಿ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಹಿಂದಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ ಪತಿ ಸೀಸನ್ 12 ಪ್ರಸಾರವಾಗುತ್ತಿದೆ. ಈ ಪ್ರಸಿದ್ಧ ಶೋಗೆ ಈಗ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ಆಯ್ಕೆಯಾಗಿದ್ದಾರೆ.
ಹೌದು, ರವಿ ಅವರ ಮಾನವೀಯ ಕೆಲಸ ಗುರುತಿಸಿ ವಾಹಿನಿ ಈ ಅವಕಾಶ ನೀಡಿದೆ. ರವಿ ಕಟಪಾಡಿ ಅವರ ಎಪಿಸೋಡ್ ಜನವರಿ 13ರಂದು ಅಂದರೆ ಇಂದು ಮುಂಬೈನಲ್ಲಿ ಶೂಟಿಂಗ್ ನಡೆಯಲಿದೆ. ಜನವರಿ 15ರಂದು ಈ ಕಾರ್ಯಕ್ರಮ ಪ್ರಸಾರವಾಗುವ ಸಾಧ್ಯತೆ ಇದೆ.
ರಾಖಿ ಸಾವಂತ್ ಗೆ ಸೀರೆ ಉಡಿಸಿದ ಅಭಿನವ್: ಪತ್ನಿಯ ಪ್ರತಿಕ್ರಿಯೆ ಹೀಗಿತ್ತು
ಈ ಬಗ್ಗೆ ರವಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೌನ್ ಬನೇಗಾ ಕರೋಡ್ ಪತಿ ಆಯೋಜಕರಿಂದ ಕರೆ ಬಂದಾಗ ಮೊದಲು ತಿರಸ್ಕರಿಸಿದ್ದೆ. ಆದರೆ ಮತ್ತೊಮ್ಮೆ ಕರೆ ಮಾಡಿ ಕೇಳಿಕೊಂಡಾಗ ಒಪ್ಪಿಗೆ ನೀಡಿದೆ' ಎಂದಿದ್ದಾರೆ. ಜೊತೆಗೆ ಎಲ್ಲರೂ ಬೆಂಬಲ ನೀಡುವಂತೆ ಕೇಳಿಕೊಂಡಿದ್ದಾರೆ.
ಒಪ್ಪಿಗೆ ನೀಡಿದ ಬಳಿಕ ರವಿ ಕಟಪಾಡಿ ಮನೆಗೆ ಕರೋಡ್ ಪತಿ ಟೀಂ ಆಗಮಿಸಿ ಪ್ರೋಮೋ ಶೂಟ್ ಮಾಡಿದ್ದಾರೆ. ಜೊತೆಗೆ ಅವರ ಸಾಮಾಜಿಕ ಕಾರ್ಯಗಳನ್ನು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ರವಿ ಮುಂಬೈಗೆ ತೆರಳಿದ್ದು ಇಂದು ಅಮಿತಾಬ್ ಮುಂದೆ ಹಾಟ್ ಸೀಟಿನಲ್ಲಿ ಕೂರಲಿದ್ದಾರೆ. ಇದು ಶುಕ್ರವಾರ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ ಪತಿ ಕರ್ಮವೀರ್ ವಿಶೇಷ ಎಪಿಸೋಡ್ ನಲ್ಲಿ ಪ್ರಸಾರ ಆಗುವ ನಿರೀಕ್ಷೆ ಇದೆ. ರವಿ ಎಷ್ಟು ಹಣ ಗೆದ್ದು ಬರುತ್ತಾರೆ ಎನ್ನುವ ಕುತೂಹಲ ಊರಿನ ಜನರಿಗೆ ಮನೆ ಮಾಡಿದೆ.
ಅಂದಹಾಗೆ ರವಿ ಕಟಪಾಡಿ ವಿಭಿನ್ನವಾದ ವೇಷ ಹಾಕಿಕೊಂಡು ಜನರನ್ನು ರಂಜಿಸಿ ಹಣ ಸಂಗ್ರಹಿಸುತ್ತಾರೆ. ಸಂಗ್ರಹಿಸಿದ ಹಣವನ್ನು ಮಾನವೀಯ ಕೆಲಗಳಿಗೆ ಬಳಸುತ್ತಾರೆ. ಬಡ ಮಕ್ಕಳ ಶಿಕ್ಷಣ, ಬಡವರ ಆರೋಗ್ಯ ಸೇರಿದಂತೆ ಸಾಕಷ್ಟು ಸಾಮಾಜಿಕ ಕೆಲಸಗಳಿಗೆ ಹಣವನ್ನು ನೀಡುತ್ತಾರೆ.
ಕಳೆದ ಆರು ವರ್ಷಗಳಿಂದ ರವಿ ಅವರು ಸುಮಾರು 52.50 ಲಕ್ಷ ರೂ. ಸಂಗ್ರಹಿಸಿದ್ದಾರೆ. ಈ ಹಣವನ್ನು 28 ಬಡ ಮಕ್ಕಳ ಚಿಕಿತ್ಸೆ ನೀಡಿದ್ದಾರೆ. ಕಳೆದ ವರ್ಷ ಕೋವಿಡ್-19 ಕಾರಣ ಹಣ ಸಂಗ್ರಹಿಸುವ ಬದಲು ವಿಶೇಷ ವೇಷ ಧರಿಸಿ ಕೊರೊನಾ ಬಗ್ಗೆ ಜಾಗೃತೆ ಮೂಡಿಸುವ ಕೆಲಸ ಮಾಡಿದ್ದಾರೆ.