Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ 'ಪುಟ್ಮಲ್ಲಿ'ಯಾದ ನಟಿ ಉಮಾಶ್ರೀ
'ಪುಟ್ನಂಜ' ಸಿನಿಮಾದ 'ಪುಟ್ಮಲ್ಲಿ ಪಾತ್ರ ಯಾರೂ ಮರೆಯಲು ಸಾಧ್ಯವಿಲ್ಲ. ಈ ಪಾತ್ರ ಉಮಾಶ್ರೀ ವೃತ್ತಿ ಜೀವನದ ಅತ್ಯುತ್ತಮ ಪಾತ್ರಗಳಲ್ಲಿ ಒಂದು. ಇದೀಗ ಉಮಾಶ್ರೀ ಮತ್ತೆ 'ಪುಟ್ಮಲ್ಲಿ'ಯಾಗತ್ತಿದೆ.
ಉಮಾಶ್ರೀ 'ಪುಟ್ಮಲ್ಲಿ' ಆಗುತ್ತಿದ್ದಾರೆ ಎಂದ ತಕ್ಷಣ ಮತ್ತೆ ಸಿನಿಮಾ ಮಾಡುತ್ತಿದ್ದಾರೆಯೇ ಎನ್ನುವ ಕುತೂಹಲ ಮೂಡುತ್ತದೆ. ಆದರೆ, ಉಮಾಶ್ರೀ ಈಗ 'ಪುಟ್ಮಲ್ಲಿ' ಆಗಿರುವುದು ಕಿರುತೆರೆಗಾಗಿ. ರಾಜಕೀಯದ ಕೆಲಸಗಳ ನಡುವೆ ನಟನೆ ಕಡಿಮೆ ಮಾಡಿದ್ದ ಉಮಾಶ್ರೀ ಇದೀಗ ಮತ್ತೆ ಕಿರುತೆರೆ ಬಂದಿದ್ದಾರೆ.
ಅಂಬರೀಶ್ ಸ್ಥಾನ ಅಭಿಷೇಕ್ ತುಂಬಲಿ' - ಉಮಾಶ್ರೀ ಭಾವುಕ ಮಾತು
ಸ್ಟಾರ್ ಸುವರ್ಣಯಲ್ಲಿ 'ಆರತಿಗೊಬ್ಬ ಕೀರ್ತಿಗೊಬ್ಬ' ಎನ್ನುವ ಹೊಸ ಧಾರಾವಾಹಿ ಬರುತ್ತಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಉಮಾಶ್ರೀ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕನ ತಾಯಿ ಪಾತ್ರ ಅವರದ್ದಾಗಿದೆ. ಮೊದಲು ಈ ಪ್ರಾಜೆಕ್ಟ್ ಒಪ್ಪಿಕೊಳ್ಳಲು ಹಿಂದೇಟು ಹಾಕಿದ್ದ ಉಮಾಶ್ರೀ ಕಥೆ ಇಷ್ಟ ಆಗಿ ಒಪ್ಪಿಕೊಂಡರಂತೆ.
ಪರಿಣಿಕ ಪ್ರೊಡಕ್ಷನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ. 'ಅಗ್ನಿಸಾಕ್ಷಿ' ಖ್ಯಾತಿಯ ಮೈಸೂರು ಮಂಜು ಸೀರಿಯಲ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಚಂದ್ರ ತೇಜಸ್ವಿ, ಮೇಘನಾ ಶೆಣೈ, ಧನ್ಯಾ ನಟಿಸುತ್ತಿದ್ದಾರೆ. ಡಿಸೆಂಬರ್ 23 ರಿಂದ ಈ ಹೊಸ ಧಾರಾವಾಹಿ ಪ್ರಸಾರ ಆಗಲಿದೆ.
ವೇಶ್ಯೆಯ ಮಗಳೆಂದು ಪತಿಯಿಂದ ಅವಮಾನ: ಉಮಾಶ್ರೀ
ಅಂದಹಾಗೆ, ಈ ಹಿಂದೆ 'ಮುಸ್ಸಂಜೆ', 'ಕಿಚ್ಚು', 'ಅಮ್ಮನಿನಾಗಿ' ಎಂಬ ಧಾರಾವಾಹಿಗಳಲ್ಲಿ ನಟಿಸಿದ್ದು, ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಮತ್ತೆ ಉಮಾಶ್ರೀ ಅಭಿಮಾನಿಗಳ ಅವರ ನಟನೆಯನ್ನು ನೋಡಬಹುದಾಗಿದೆ.