'ಒಗ್ಗರಣೆ ಡಬ್ಬಿ'ಯಲ್ಲಿ ಉಪ್ಪಿಯ 'ಉಪ್ಪಿಟ್ಟು' ವಿಶೇಷ

By Harshitha

ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಕಾರ್ಯಕ್ರಮ 'ಒಗ್ಗರಣೆ ಡಬ್ಬಿ'. ಗೃಹಿಣಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿರುವ ಈ ಕಾರ್ಯಕ್ರಮದಲ್ಲಿ ತಯಾರಿಸಲಾದ ಖಾದ್ಯಗಳ ಪುಸ್ತಕವೂ ಸೂಪರ್ ಹಿಟ್ ಆಗಿದೆ. ಈ ಯಶಸ್ವಿ ಪುಸ್ತಕದ ಮೂರನೇ ಸಂಚಿಕೆಯನ್ನು ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದ್ದಾರೆ.

ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ 'ಒಗ್ಗರಣೆ ಡಬ್ಬಿ ವರಮಹಾಲಕ್ಷ್ಮಿ ಹಬ್ಬದ ವಿಶೇಷ' ಕಾರ್ಯಕ್ರಮದ ಚಿತ್ರೀಕರಣ ಸಂದರ್ಭದಲ್ಲಿ ಉಪೇಂದ್ರ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. [ಜೀ ಕನ್ನಡ 'ಒಗ್ಗರಣೆ ಡಬ್ಬಿ' ಘಮಲಿಗೆ 500ರ ಸಂಭ್ರಮ]

upendra

ವರಮಹಾಲಕ್ಷ್ಮಿ ಹಬ್ಬದ ವಿಶೇಷ ಸಂಚಿಕೆಯಲ್ಲಿ ಉಪೇಂದ್ರ ಅವರೇ ಸ್ವತಃ ಉಪ್ಪಿಟ್ಟು ತಯಾರಿಸಿದ್ದು ವಿಶೇಷ. ಆ ಬಳಿಕ ಮಾತನಾಡಿದ ಉಪೇಂದ್ರ 'ಅಡುಗೆ ಅನ್ನೋದು ಬ್ರಹ್ಮ ವಿದ್ಯೆ. ಅದೂ ಒಂದು ಕಲೆ. ಊಟವನ್ನು ನಾನು ಎಂಜಾಯ್ ಮಾಡ್ತೀನಿ. ಮಾಮೂಲಿಯಾಗಿ ಅಡುಗೆ ಹೇಗೆ ಇದ್ದರೂ ಉಪ್ಪಿನಕಾಯಿ, ಸಾಂಬಾರುಗಳನ್ನು ಸೇರಿಸಿ ನಾನೇ ಒಂದು ರುಚಿ ಕ್ರಿಯೇಟ್ ಮಾಡಿಕೊಳ್ತೀನಿ'' ಅಂತಾರೆ.

ಈ ವಿಶೇಷ ಕಾರ್ಯಕ್ರಮ ವರಮಹಾಲಕ್ಷ್ಮಿ ಹಬ್ಬದ ಶುಕ್ರವಾರದಂದು ಮಧ್ಯಾಹ್ನ 1 ರಿಂದ 2 ಘಂಟೆಯ ವರೆಗೆ ಜೀ ವಾಹಿನಿಯಲ್ಲಿ ಪ್ರಸಾರವಾಗಲಿದೆ.

More from Filmibeat

English summary
Kannada Actor Upendra has prepared Uppittu in Zee Kannada's famous 'Oggarane Dabbi' program. This episode will telecast on Varamahalakshmi festival.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X