Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್ ಗೆ ಸಿಕ್ಕ ಗೋಲ್ಡನ್ ಅವಕಾಶ ವಿಜಯ್ ರಾಘವೇಂದ್ರ ಪಾಲಾಗಿದಿದ್ರೆ.?!
ಗಣೇಶ್ ರವರನ್ನ ಏಕಾಏಕಿ ಸ್ಟಾರ್ ಪಟ್ಟಕ್ಕೆ ಏರಿಸಿದ ಸಿನಿಮಾ 'ಮುಂಗಾರು ಮಳೆ'. 2006 ರಲ್ಲಿ ಬಿಡುಗಡೆ ಆದ ಈ ಸಿನಿಮಾ ಗಣೇಶ್, ಯೋಗರಾಜ್ ಭಟ್ ಹಾಗೂ ಪೂಜಾ ಗಾಂಧಿ ವೃತ್ತಿ ಬದುಕಿಗೆ ದೊಡ್ಡ ತಿರುವು ನೀಡಿತು.
ಹೌದು, 'ಮುಂಗಾರು ಮಳೆ' ಕಥೆ ರೆಡಿ ಮಾಡಿಟ್ಟುಕೊಂಡು, ವಿಜಯ್ ರಾಘವೇಂದ್ರ ರವರ ಜೊತೆ ಮಾತುಕತೆ ನಡೆಸಲು ಯೋಗರಾಜ್ ಭಟ್ ನಿರ್ಧಾರ ಮಾಡಿದ್ದರಂತೆ. ಆದ್ರೆ, ಅಷ್ಟರಲ್ಲಿ ಪ್ಲಾನ್ ಚೇಂಜ್ ಆಯ್ತಂತೆ. ಹಾಗಂತ ಸ್ವತಃ ವಿಜಯ್ ರಾಘವೇಂದ್ರ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ವಿಜಯ್ ರಾಘವೇಂದ್ರ ಜೊತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಅಪ್ಪು, ಶಿವಣ್ಣ
ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಜಯ್ ರಾಘವೇಂದ್ರ, ''ನನಗೆ 'ಮುಂಗಾರು ಮಳೆ' ಕಥೆ ಹೇಳಬೇಕು ಅಂತ ಯೋಗರಾಜ್ ಭಟ್ ಅಂದುಕೊಂಡಿದ್ದರಂತೆ. ಆದ್ರೆ ಬಿಜಿ ಇರಬೇಕು ಅಂತ ಹೇಳ್ಲಿಲ್ಲವಂತೆ. ಯೋಗರಾಜ್ ಭಟ್ ನನಗೆ ಪರಿಚಯ ಇದ್ದರು. ಅವರ 'ಮಣಿ' ಚಿತ್ರವನ್ನ ಶ್ರೀಮುರಳಿ ಮಾಡಬೇಕಿತ್ತು'' ಎಂದು ಹಳೆ ದಿನಗಳನ್ನ ಮೆಲುಕು ಹಾಕಿದರು.