Don't Miss!
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮೇಶ್ ಬಾಯಿಂದ ಹೊರಬಂದ ಎಚ್.ಡಿ.ದೇವೇಗೌಡ ಸಾಧನೆಯ ವಿವರ..
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಸಾಧಕರ ಸೀಟ್ ಗೆ ಹೊಸ ಕಳೆ ಬಂದಿದ್ದು ರಾಜಕೀಯ ನಾಯಕ, ಜೆ.ಡಿ.ಎಸ್ ವರಿಷ್ಟ ಎಚ್.ಡಿ.ದೇವೇಗೌಡ ಆಸೀನರಾದ ಮೇಲೆ.
ಹೆಚ್ಚಾಗಿ ಕನ್ನಡ ಚಿತ್ರರಂಗದ ತಾರೆಯರೇ ಭಾಗವಹಿಸುತ್ತಿದ್ದ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಪಾಲ್ಗೊಂಡು, ತಮ್ಮ ಜೀವನವನ್ನು ರಿವೈಂಡ್ ಮಾಡಿ ನೋಡಿದರು.
ನಟ ರಮೇಶ್ ಅರವಿಂದ್ ಬಾಯಿಂದ ಎಚ್.ಡಿ.ದೇವೇಗೌಡ ರವರ ಸಾಧನೆಯ ಹೆಜ್ಜೆ ಗುರುತು ಹೊರಬಂದಿದ್ದು ಹೀಗೆ....
ಎಚ್.ಡಿ.ದೇವೇಗೌಡ ಕುರಿತು...
ನಿಜ
ನಾಮ
:
ಹರದನಹಳ್ಳಿ
ದೊಡ್ಡೇಗೌಡ
ದೇವೇಗೌಡ
ಜನನ:
ಮೇ
18,
1933
ಊರು:
ಹಾಸನ
ಜಿಲ್ಲೆಯ
ಹೊಳೆನರಸೀಪುರ
ತಾಲೂಕಿನ
ಹರದನಹಳ್ಳಿ
ಜನನ
ತಂದೆ:
ದಿವಂಗತ
ಶ್ರೀ
ದೊಡ್ಡೇಗೌಡ
ತಾಯಿ:
ದಿವಂಗತ
ಶ್ರೀ
ಲಕ್ಷ್ಮಿದೇವಮ್ಮ
ತಮ್ಮ:
ದಿವಂಗತ
ಶ್ರೀ
ಬಸವೇಗೌಡ
ತಂಗಿಯರು:
ಶ್ರೀಮತಿ
ಅಕ್ಕಯ್ಯಮ್ಮ,
ಪುಟ್ಟಮ್ಮ
ಪತ್ನಿ:
ಚನ್ನಮ್ಮ
ಮಕ್ಕಳು:
ಎಚ್.ಡಿ.ಬಾಲಕೃಷ್ಣ,
ಎಚ್.ಡಿ.ರೇವಣ್ಣ,
ಎಚ್.ಡಿ.ಕುಮಾರಸ್ವಾಮಿ,
ಎಚ್.ಡಿ.ರಮೇಶ್, ಅನಸೂಯ,
ಶೈಲಜಾ
ಗುತ್ತಿಗೆದಾರನಾಗಿ ಕೆಲಸ ಮಾಡಿದ್ದ ಎಚ್.ಡಿ.ಡಿ
1952ರಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಸಿವಿಲ್ ಡಿಪ್ಲೊಮ ಪದವಿ ಪಡೆದ ಎಚ್.ಡಿ.ದೇವೇಗೌಡ ರವರು ಹತ್ತು ವರ್ಷಗಳ ಕಾಲ ಗುತ್ತಿಗೆದಾರರಾಗಿ ಕೆಲಸ ಮಾಡಿದರು.
ಎಚ್.ಡಿ.ದೇವೇಗೌಡ ಉಗ್ರಾವತಾರ ತಾಳಿದ ಅನೇಕರಿಗೆ ತಿಳಿಯದ ರೋಚಕ ಘಟನೆಯಿದು.!
ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರವೇಶ
1952-53 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟ ಎಚ್.ಡಿ.ದೇವೇಗೌಡ ರವರು, 1962ರಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟು ಪಕ್ಷೇತರರಾಗಿ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.
ಇದಕ್ಕೆ ನೋಡಿ ಎಚ್.ಡಿ.ದೇವೇಗೌಡ ಅಂದ್ರೆ ವೀಕ್ಷಕರಿಗೆ ಗೌರವ, ಪ್ರೀತಿ, ಹೆಮ್ಮೆ.!
ವಿರೋಧ ಪಕ್ಷದ ನಾಯಕ
1972 ರಲ್ಲಿ ಎಸ್.ನಿಜಲಿಂಗಪ್ಪ ರವರ ಸಂಸ್ಥಾ ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಗೆದ್ದು, ಪ್ರಪ್ರಥಮ ಬಾರಿಗೆ ವಿರೋಧ ಪಕ್ಷದ ನಾಯಕರಾದರು ಎಚ್.ಡಿ.ದೇವೇಗೌಡ.
ಎಚ್.ಡಿ.ದೇವೇಗೌಡ ರವರ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಅಂತ ಗೊತ್ತಾದ್ರೆ, ನೀವೇ ಕಣ್ಣರಳಿಸುತ್ತೀರಾ.!
ಜನತಾ ಪಾರ್ಟಿ
1977ರಲ್ಲಿ ಸಂಸ್ಥಾ ಕಾಂಗ್ರೆಸ್, ಜನತಾ ಪಕ್ಷಕ್ಕೆ ವಿಲೀನವಾದ ಮೇಲೆ ಜನತಾ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಆದರು ಎಚ್.ಡಿ.ದೇವೇಗೌಡ.
ಜೀವನದಲ್ಲಿ ಎಚ್.ಡಿ.ದೇವೇಗೌಡ ಮಾಡಿರುವ ಮಹಾನ್ ಶಪಥ ಏನ್ಗೊತ್ತಾ.?
ಸಚಿವರಾಗಿ ಕೆಲಸ...
1983 ರಲ್ಲಿ ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಎಚ್.ಡಿ.ದೇವೇಗೌಡ ಮಂತ್ರಿ ಆದರು. ನೀರಾವರಿ ಹಾಗೂ ಲೋಕೋಪಯೋಗಿ ಸಚಿವರಾಗಿ ಕೆಲಸ ನಿರ್ವಹಿಸಿದರು.
ಕರ್ನಾಟಕದ ಹದಿನಾಲ್ಕನೇ ಮುಖ್ಯಮಂತ್ರಿ...
1994 ರಲ್ಲಿ ಜನತಾದಳದಿಂದ ಕರ್ನಾಟಕದ 14ನೇ ಮುಖ್ಯಮಂತ್ರಿ ಆದರು ಎಚ್.ಡಿ.ದೇವೇಗೌಡ.
ಭಾರತದ ಹನ್ನೊಂದನೇ ಪ್ರಧಾನ ಮಂತ್ರಿ
1996 ರಲ್ಲಿ ರಾಷ್ಟ್ರ ರಾಜಕಾರಣದ ಅತ್ಯುನ್ನತ ಪದವಿ ಆದ ಭಾರತ ದೇಶದ ಹನ್ನೊಂದನೇ ಪ್ರಧಾನ ಮಂತ್ರಿ ಆದರು.
ಪತ್ನಿ-ಸೊಸೆ ಮೇಲೆ ಆಸಿಡ್ ದಾಳಿ: ದೇಶದ ಜನತೆಗೆ ಗೊತ್ತಿಲ್ಲದ ಸತ್ಯ ಹೇಳಿದ ದೇವೇಗೌಡ.!
ಏಕೈಕ ಕನ್ನಡಿಗ
ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಏಕೈಕ ಕನ್ನಡಿಗ, ಮಣ್ಣಿನ ಮಗ ಎಚ್.ಡಿ.ದೇವೇಗೌಡ.