Don't Miss!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Breaking News : ಅಂತ್ಯ ಆಗ್ತಿದೆ 'ವೀಕೆಂಡ್ ವಿತ್ ರಮೇಶ್ 4'
Recommended Video
''ಸಮಯ 9.30 ಆಯ್ತು. ನಾನು ರಮೇಶ್ ಬಂದಾಯ್ತು. ಶುರು ಮಾಡೋಣ.. ದಿಸ್ ಇಸ್ 'ವೀಕೆಂಡ್ ವಿತ್ ರಮೇಶ್''. ಎಂದು ಪ್ರತಿ ವಾರ ರಮೇಶ್ ಕಾರ್ಯಕ್ರಮ ಶುರು ಮಾಡುತ್ತಿದ್ದರು.
ಆದರೆ, ಈಗ ''ನಾವು ಕಾರ್ಯಕ್ರಮದ ಅಂತಿಮ ಹಂತಕ್ಕೆ ಬಂದಿದ್ದೇವೆ. ನಮ್ಮ ಕಾರ್ಯಕ್ರಮ ನಿಮಗೆ ಮನರಂಜನೆ ನೀಡುತ್ತಿದೆ ಅನಿಸುತ್ತದೆ.'' ಎಂದು ಹೇಳಿ ಕಾರ್ಯಕ್ರಮವನ್ನು ಮುಗಿಸುತ್ತಿದ್ದಾರೆ.
ಸಾವಿರ ಸಿನಿಮಾ ಮಾಡಿರುವ ಹೊನ್ನವಳ್ಳಿ ಕೃಷ್ಣಗೆ 'ವೀಕೆಂಡ್ ವಿತ್ ರಮೇಶ್'ನಲ್ಲಿ ಜಾಗ ಇಲ್ಲವೇ?
ಹೌದು, 'ವೀಕೆಂಡ್ ವಿತ್ ರಮೇಶ್ 4' ಕಾರ್ಯಕ್ರಮ ಈಗ ಕೊನೆಯ ಹಂತಕ್ಕೆ ಬಂದಿದೆ. ಕಾರ್ಯಕ್ರಮಕ್ಕೆ ಅವರು ಬರಬೇಕು.. ಇವರು ಬರಬೇಕು.. ಎನ್ನುವ ಲೆಕ್ಕಾಚಾರದ ಮುಗಿಯುವ ಮುನ್ನವೇ ಈ ಸೀಸನ್ ಕೊನೆಯಾಗುತ್ತಿದೆ. ಇದರ ಬಗ್ಗೆ ನಟ ಹಾಗೂ ಕಾರ್ಯಕ್ರಮದ ನಿರೂಪಕ ರಮೇಶ್ ಅರವಿಂದ್ ಸುಳಿವು ನೀಡಿದ್ದಾರೆ. ಮುಂದೆ ಓದಿ..
ಸುಳಿವು ನೀಡಿದ ರಮೇಶ್ ಅರವಿಂದ್
ನಟ ರಮೇಶ್ ಅರವಿಂದ್ 'ವೀಕೆಂಡ್ ವಿತ್ ರಮೇಶ್ 4' ಕಾರ್ಯಕ್ರಮದ ಬಗ್ಗೆ ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ''ಈಗ ತಾನೇ ಸೀಸನ್ 4 ಶುರು ಆಗಿತ್ತು ಅನಿಸಿತ್ತು, ಧರ್ಮಸ್ಥಳದ ಧರ್ಮಾಧಿಕಾರಿಗಳು ಈ ಸೀಟ್ ಮೇಲೆ ಕೂತಿದ್ದರು ಅನಿಸ್ತು. ಆದರೆ, ಕಾರ್ಯಕ್ರಮ ಆಗಲೇ ಮುಗಿಯುತ್ತಾ ಬಂತು.'' ಎಂದು ರಮೇಶ್ ವಿಡಿಯೋ ಮೂಲಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.
ಒಂದು, ಎರಡು ವಾರ ಬಾರಿ ಇದೆ
ರಮೇಶ್ ಅರವಿಂದ್ ತಿಳಿಸಿರುವ ಪ್ರಕಾರ, 'ವೀಕೆಂಡ್ ವಿತ್ ರಮೇಶ್ ಸೀಸನ್ 4' ಕಾರ್ಯಕ್ರಮ ಇನ್ನು ಒಂದು, ಎರಡು ವಾರ ಮಾತ್ರ ನಡೆಯುತ್ತದೆ. ವಾಲ್ ಆಫ್ ಫ್ರೆಮ್ ನಲ್ಲಿ ಇನ್ನು ಮೂರು ಫೋಟೋಗಳು ಬಾಕಿ ಇದ್ದು, ಮೂರು ಸಂಚಿಕೆಗಳ ಬಳಿಕ ಕಾರ್ಯಕ್ರಮ ಅಂತ್ಯ ಆಗುವ ಸೂಚನೆ ಸಿಕ್ಕಿದೆ.
ಭಗವಾನ್ ವಿಷ್ಯದಲ್ಲಿ 'ವೀಕೆಂಡ್ ವಿತ್ ರಮೇಶ್' ಮಾಡುತ್ತಿರುವುದು ಎಷ್ಟು ಸರಿ?
17 ಸಾಧಕರು ಬಂದಿದ್ದಾರೆ
ಸೀಸನ್ 4 ರಲ್ಲಿ ಈವರೆಗೆ 17 ಸಾಧಕರ ಬಂದಿದ್ದಾರೆ. ಸಿನಿಮಾ ಹಾಗೂ ಸಿನಿಮಾ ಕ್ಷೇತ್ರ ಬಿಟ್ಟು ಇತರ ಸಾಧಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಬಾರಿಯ ಕೆಲವು ಸಂಚಿಕೆಗಳು ಪ್ರಶಂಸೆ ಪಡೆದರೆ, ಇನ್ನು ಕೆಲವು ಸಂಚಿಕೆಗಳಿಂದ ವಾಹಿನಿ ವೀಕ್ಷಕ ಅಸಮಾಧಾನಕ್ಕೆ ಕಾರಣ ಆಯ್ತು. ಈ ಸೀಸನ್ ನಲ್ಲಿ ಏಳು ಬೀಳು ಇತ್ತು.
ಈ ಬಾರಿ ಬಂದ ಅತಿಥಿಗಳು
ಶಂಕರ್ ಬಿದರಿ, ಟೈಗರ್ ಅಶೋಕ್ ಕುಮಾರ್, ಬಿರಾದರ್, ಚಿಕ್ಕಣ್ಣ, ಶರಣ್, ಸುಮಲತಾ ಅಂಬರೀಶ್, ಟಿ ಎಸ್ ನಾಗಾಭರಣ, ಸುಧಾಮೂರ್ತಿ, ನಾರಾಯಣ ಮೂರ್ತಿ, ಶ್ರೀಮುರಳಿ, ವಿನಯ ಪ್ರಸಾದ್, ಶಶಿಕುಮಾರ್, ಪ್ರೇಮಾ, ಪ್ರಕಾಶ್ ಬೆಳವಾಡಿ, ರಾಘವೇಂದ್ರ ರಾಜ್ ಕುಮಾರ್, ವೀರೇಂದ್ರ ಹೆಗ್ಗಡೆ ಈ ಬಾರಿ ಬಂದ ವೀಕೆಂಡ್ ಅತಿಥಿಗಳು
'ವೀಕೆಂಡ್ ವಿತ್ ರಮೇಶ್'ಗೆ ಕಾರ್ನಾಡರನ್ನು ಕರೆಸೋ ಪ್ಲಾನ್ ಫೇಲ್ ಆಯ್ತು
ಕೊನೆಯ ಅತಿಥಿ ಯಾರು?
ಸೀಸನ್ 4 ನಲ್ಲಿಯ ಇನ್ನು ಮೂರು ಸಂಚಿಕೆಗಳು ಬಾಕಿ ಇದ್ದು, ಕೊನೆಯ ಸಂಚಿಕೆಯ ಅತಿಥಿ ಯಾರು ಎನ್ನುವ ಪ್ರಶ್ನೆ ಮೂಡಿದೆ. ಮೊದಲ ಸೀಸನ್ ನಲ್ಲಿ ರಮೇಶ್ ಅರವಿಂದ್, ಎರಡನೇ ಸೀಸನ್ ನಲ್ಲಿ ಸುದೀಪ್, ಮೂರನೇ ಸೀಸನ್ ನಲ್ಲಿ ಗಣೇಶ್ ಕೊನೆಯ ಅತಿಥಿಗಳು ಆಗಿದ್ದರು.