Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಿರಿಗನ್ನಡಂ ಗೆಲ್ಗೆ' ಘೋಷಣೆಯನ್ನು ರೂಪಿಸಿದವರು ಯಾರು?
ಕನ್ನಡ ನಾಡು-ನುಡಿ, ಭಾಷೆಯ ವಿಷಯ ಬಂದಾಗ ಅಲ್ಲಿ 'ಸಿರಿಗನ್ನಡಂ ಗೆಲ್ಗೆ' ಎಂಬ ಘೋಷಣೆ ಕೇಳುವುದು ಸಂಪ್ರದಾಯ ಮತ್ತು ಸಹಜ. ಆದರೆ, ಅನೇಕರಿಗೆ 'ಸಿರಿಗನ್ನಡಂ ಗೆಲ್ಗೆ' ಘೋಷಣೆಯನ್ನು ರೂಪಿಸಿದವರು ಯಾರು?' ಎಂದು ಗೊತ್ತೆ ಇಲ್ಲ.
ಈ ಪ್ರಶ್ನೆಯನ್ನ ಕಿರುತೆರೆಯ ಖ್ಯಾತ ಟಿವಿ ಶೋ ಕನ್ನಡದ ಕೋಟ್ಯಧಿಪತಿಯ ನಾಲ್ಕನೇ ಆವೃತ್ತಿಯಲ್ಲಿ ಕೇಳಲಾಯಿತು. ಹಾಟ್ ಸೀಟ್ ನಲ್ಲಿ ಕುಳಿತುಕೊಂಡಿದ್ದ ತನ್ಮಯ ಅವರು ಈ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗಲಿಲ್ಲ.
25 ಲಕ್ಷದ ಪ್ರಶ್ನೆ ನೋಡಿ ಆಟ ಕ್ವಿಟ್ ಮಾಡಿದ ರಾಘವೇಂದ್ರ: ಯಾವುದು ಆ ಪ್ರಶ್ನೆ?
ಹಾಗಾಗಿ, 3.20 ಲಕ್ಷದ ಪ್ರಶ್ನೆಯನ್ನ ಎದುರಿಸಿದ ತನ್ಮಯ, ಸ್ಪಷ್ಟ ಉತ್ತರ ಗೊತ್ತಾಗದೇ ಆಟವನ್ನು ಕ್ವಿಟ್ ಮಾಡಿದರು. ಅಂದ್ಹಾಗೆ, 'ಸಿರಿಗನ್ನಡಂ ಗೆಲ್ಗೆ' ಘೋಷಣೆಯನ್ನು ರೂಪಿಸಿದವರು ರಾಹು ದೇಶಪಾಂಡೆ.
ಉತ್ತರ ಕರ್ನಾಟಕದಲ್ಲಿ ಕನ್ನಡದ ಧ್ವನಿಯಾಗುವಂತಹ ಸಂಸ್ಥೆಯೊಂದನ್ನು ಕಟ್ಟಲು ಸತತ ಮೂರು ವರ್ಷಗಳವರೆಗೆ ಪರಿಶ್ರಮಪಟ್ಟ ರಾ.ಹ.ದೇಶಪಾಂಡೆಯವರು 1890ರಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಸ್ಥಾಪಿಸಿ, ಅದರ ಪ್ರಥಮ ಕಾರ್ಯದರ್ಶಿಯಾದರು. ಮೊದಮೊದಲು ತಮ್ಮ ಪತ್ರವ್ಯವಹಾರಗಳಲ್ಲೆಲ್ಲ 'ಕನ್ನಡ ಬೆಳೆಯಲಿ' ಎನ್ನುವ ಶೀರ್ಷಿಕೆ ಘೋಷವಾಕ್ಯವನ್ನು ಬರೆಯುತ್ತಿದ್ದ ರಾ.ಹ.ದೇಶಪಾಂಡೆಯವರು 'ಸಿರಿಗನ್ನಡಂ ಗೆಲ್ಗೆ' ಎನ್ನುವ ಶೀರ್ಷಿಕೆಯ ಘೋಷವಾಕ್ಯವನ್ನು 1893ರಲ್ಲಿ ಬಳಸಲು ಪ್ರಾರಂಭಿಸಿದರೆಂದು ಹೇಳಲಾಗುತ್ತಿದೆ.
ಕೂದಲೆಳೆಯ ಅಂತರದಲ್ಲಿ 25 ಲಕ್ಷ ಕಳೆದುಕೊಂಡ ಕೋಟ್ಯಧಿಪತಿ ಸ್ಪರ್ಧಿ ಅನುರಾಧ
ಆದರೆ, 1893ರ ಅವರ ಪತ್ರಗಳು ದೊರೆತ್ತಿಲ್ಲ. ಅವರು ಬರೆದ 1895ರ ಒಂದು ಪತ್ರ ದೊರೆತಿದ್ದು ಅದರಲ್ಲಿ ಈ ಶೀರ್ಷಿಕೆ ಘೋಷವಾಕ್ಯ ಕಂಡು ಬಂದಿದೆ. ಆದುದರಿಂದ ರಾ.ಹ.ದೇಶಪಾಂಡೆಯವರನ್ನು "ಸಿರಿಗನ್ನಡಂ ಗೆಲ್ಗೆ" ಮಂತ್ರದ ದ್ರಷ್ಟಾರರೆನ್ನಬಹುದು. ಆ ನಂತರ ಈ ಘೋಷವಾಕ್ಯದಿಂದ ತುಂಬ ಪ್ರಭಾವಿತರಾದ ಬಿ.ಎಮ್.ಶ್ರೀಕಂಠಯ್ಯನವರು ಇದನ್ನು ತಾವೂ ಬಳಸಿ ಜನಪ್ರಿಯಗೊಳಿಸಿದರು.
ಕರ್ನಾಟಕ ವಿದ್ಯಾವರ್ಧಕ ಸಂಘವು ಕನ್ನಡ ನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ಪುಸ್ತಕ ಪಾರಿತೋಷಕ ಯೋಜನೆಯನ್ನು ಪ್ರಾರಂಭಿಸಿತು. 1896ರಲ್ಲಿ ವಾಗ್ಭೂಷಣವೆನ್ನುವ ಸಾಹಿತ್ಯಕ ಹಾಗು ವಿಮರ್ಶಾತ್ಮಕ ಮಾಸಿಕವನ್ನು ಪ್ರಾರಂಭಿಸಿತು. 1907ರಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಸಮ್ಮೇಳನವನ್ನು ಮೊಟ್ಟ ಮೊದಲನೆಯದಾಗಿ ಸಂಘಟಿಸಿತು. ಈ ರೀತಿಯಾಗಿ ರಾ.ಹ.ದೇಶಪಾಂಡೆಯವರು ಕರ್ನಾಟಕ ವಿದ್ಯಾವರ್ಧಕ ಸಂಘದ ಮೂಲಕ ಉತ್ತರ ಕರ್ನಾಟಕದಲ್ಲಿ ಕನ್ನಡವನ್ನು ಪುನರುಜ್ಜೀವನಗೊಳಿಸಿದರು ಎಂದು ಹೇಳಬಹುದು.