Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೀಕೆಂಡ್' ಶೋಗೆ ಎಸ್.ಎಲ್.ಭೈರಪ್ಪ ಬರ್ತಾರಾ.? ರಾಘವೇಂದ್ರ ಹುಣಸೂರು ಏನಂದ್ರು.?
ಕಿರುತೆರೆಯಲ್ಲಿ ಸದ್ಯ ಭಾರಿ ಜನಪ್ರಿಯತೆ ಗಳಿಸಿರುವ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ಈ ಕಾರ್ಯಕ್ರಮಕ್ಕೆ ಅವರು ಬರಬೇಕು, ಇವರು ಬರಬೇಕು ಅಂತ ತುಂಬಾ ಜನ ತಮಗೆ ಇಷ್ಟವಾದ ಸಾಧಕರ ಹೆಸರನ್ನ ಆಗಾಗ ಹೇಳುತ್ತಾ ಇರುತ್ತಾರೆ. ಈಗ ಅದೇ ವೀಕ್ಷಕರ ಬಳಗದಿಂದ ಹಿರಿಯ ಸಾಹಿತಿ 'ಎಸ್.ಎಲ್.ಭೈರಪ್ಪ' ಸಾಧಕರ ಸೀಟ್ ನಲ್ಲಿ ಕೂರಬೇಕು ಎಂಬ ಕೂಗು ಕೇಳಿಬಂದಿದೆ.
ವೀಕೆಂಡ್ ವಿತ್ ರಮೇಶ್-3 ಕಾರ್ಯಕ್ರಮದಲ್ಲಿ ಹೆಚ್ಚಾಗಿ ಸಿನಿಮಾದವರನ್ನೇ ಕರೆಸುತ್ತಾರೆ ಎನ್ನುವ ಅಪವಾದದಿಂದ ಹೊರ ಬಂದು ಈ ಸೀಸನ್ ನಲ್ಲಿ ಪ್ರಾಣೇಶ್ ಮತ್ತು ರವಿ.ಡಿ ಚನ್ನಣ್ಣನವರ್ ಭಾಗವಹಿಸಿದ್ದರು. ಈಗ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಹಿರಿಯ ಸಾಹಿತಿ 'ಎಸ್.ಎಲ್.ಭೈರಪ್ಪ' ಅವರನ್ನ ಸಹ ಕರೆ ತರುವ ತಯಾರಿಗಳು ನಡೆಯುವ ಸಾಧ್ಯತೆ ಇದೆ.
ಅಂದಹಾಗೆ, ಎಸ್.ಎಲ್.ಭೈರಪ್ಪ ರವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬರ್ತಾರಾ.? ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ....
ಮೊದಲು ಶುರುವಾಗಿದ್ದು ಎಲ್ಲಿ.?
ಎಸ್.ಎಲ್.ಭೈರಪ್ಪ ಅವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎನ್ನುವುದು ಅನೇಕರ ಬಯಕೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಕೂಡ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಪ್ರತಾಪ್ ಸಿಂಹ ಫೇಸ್ ಬುಕ್ ನಲ್ಲಿ ಬರೆದಿರುವುದೇನು..?
''ಬೆಳಗಾವಿಯ ವಿವೇಕ ಎಂಬುವವರಿಂದ ಬಂದ ಸಲಹೆ: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ನಮ್ಮ ಹೆಮ್ಮೆಯ ಲೇಖಕರಾದ ಎಸ್.ಎಲ್.ಭೈರಪ್ಪನವರನ್ನು ಕರೆಸಿ ಎಂದು ಒತ್ತಾಯ ಮಾಡೋಣವೇ? ಒಪ್ಪಿಸುವ ದುಸ್ಸಾಹಸಕ್ಕೆ ನಾನೇ ಕೈ ಹಾಕುತ್ತೇನೆ'' ಹೀಗಂತ ಪ್ರತಾಪ್ ಸಿಂಹ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ರಾಘವೇಂದ್ರ ಹುಣಸೂರು ಉತ್ತರ
ಪ್ರತಾಪ್ ಸಿಂಹ ರವರ ಈ ಬೇಡಿಕೆಗೆ ಜೀ ಕನ್ನಡ ಬಿಜಿನೆಸ್ ಹೆಡ್ ಆದ ರಾಘವೇಂದ್ರ ಹುಣಸೂರು ಉತ್ತರಿಸಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದ್ದು, 'ಇಬ್ಬರು ಸೇರಿ ಭೈರಪ್ಪ ಅವರನ್ನ ಭೇಟಿ ಮಾಡೋಣ' ಅಂತ ಹೇಳಿದ್ದಾರೆ.
ಜನರ ಆಸೆಯೂ ಅದೇ..!
ಪ್ರತಾಪ್ ಸಿಂಹ ಅವರ ಈ ಪೋಸ್ಟ್ ಗೆ ಐದು ಸಾವಿರಕ್ಕೂ ಹೆಚ್ಚು ಜನರು ತಮ್ಮ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನೂರಾರು ಜನರು 'ಭೈರಪ್ಪ ಅವರ ಜೀವನದ ಬಗ್ಗೆ ತಿಳಿದುಕೊಳ್ಳಬೇಕು', 'ಅವರು ಈ ಕಾರ್ಯಕ್ರಮಕ್ಕೆ ಬರಬೇಕು' ಅಂತ ಕಾಮೆಂಟ್ ಮಾಡಿದ್ದಾರೆ.
ಭೈರಪ್ಪ ಬರ್ತಾರಾ..?
ಎಸ್.ಎಲ್.ಭೈರಪ್ಪ ಅವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬರ್ತಾರಾ ಅನ್ನೋದು ಇದೀಗ ಎಲ್ಲರ ತಲೆಯಲ್ಲಿ ಕಾಡುತ್ತಿರುವ ಪ್ರಶ್ನೆ.