Don't Miss!
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಹರಡದಂತೆ ತಡೆಯಲು ಝೀ ವಾಹಿನಿಯಿಂದ ಹೊಸ ಮಾರ್ಗ
ಕೊರೊನಾ ವೈರಸ್ ಎರಡನೇ ಅಲೆ ಹಿನ್ನೆಲೆ ಚಿತ್ರಮಂದಿರಗಳು ಬಂದ್ ಆಗಿವೆ. ಅದರೆ ಸಿನಿಮಾ ಶೂಟಿಂಗ್, ಧಾರಾವಾಹಿ ಅಥವಾ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಯಾವುದೇ ತೊಂದರೆ ಇಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೆಲಸ ಮುಂದುವರಿಸಿವೆ.
ಇದೀಗ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಆಯೋಜಕರು ಕೊರೊನಾ ಎದುರಿಸಲು ಉತ್ತಮ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಈ ಕುರಿತು ನಟಿ ಹಾಗು ಕಾರ್ಯಕ್ರಮದ ತೀರ್ಪುಗಾರರಾಗಿರುವ ರಕ್ಷಿತಾ ಪ್ರೇಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬಹಿರಂಗಪಡಿಸಿದ್ದಾರೆ.
ಜೀ ಕನ್ನಡದ ಅದ್ಧೂರಿ ಧಾರಾವಾಹಿ 'ಜೊತೆ ಜೊತೆಯಲಿ' 400ರ ಸಂಭ್ರಮ
ಕೊರೊನಾ ಹರಡದಂತೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ತೀರ್ಪುಗಾರರ ನಡುವೆ ಗ್ಲಾಸ್ ಶೀಲ್ಡ್ ಹಾಕಲಾಗಿದೆ. ಇದರಿಂದ ತೀರ್ಪುಗಾರರ ನಡುವಿನ ಅಂತರ ಕಾಪಾಡಬಹುದು.
ರಕ್ಷಿತಾ ಪ್ರೇಮ್, ವಿಜಯ ರಾಘವೇಂದ್ರ ಹಾಗೂ ಚಿನ್ನಿ ಪ್ರಕಾಶ್ ಮಾಸ್ಟರ್ ಈ ಶೋನಲ್ಲಿ ತೀರ್ಪುಗಾರರಾಗಿದ್ದಾರೆ. ಈ ಮೂವರ ನಡುವೆ ಗ್ಲಾಸ್ ಶೀಲ್ಡ್ ಹಾಕಿ ಅಂತರ ಕಾಪಾಡಲಾಗಿದೆ. ಸ್ಪರ್ಧಿಗಳ ಆಸನ ವಿಚಾರದಲ್ಲೂ ಅಂತರ ಉಳಿಸಿಕೊಳ್ಳಲಾಗಿದೆ.
ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಈ ಸಮಯದಲ್ಲಿ ಝೀ ವಾಹಿನಿ ಇಂತಹದೊಂದು ಮಾರ್ಗ ಕಂಡುಕೊಂಡಿರುವುದು ವೀಕ್ಷಕರ ವಲಯದಲ್ಲಿ ಮೆಚ್ಚುಗೆ ಪಡೆದುಕೊಂಡಿದೆ. ರಕ್ಷಿತಾ ಅವರ ಈ ಪೋಸ್ಟ್ನ್ನು ನೆಟ್ಟಿಗರು ಸ್ವಾಗತಿಸಿದ್ದಾರೆ.
ಇನ್ನುಳಿದಂತೆ ಝೀ ವಾಹಿನಿಯೂ ಬೇರೆ ಯಾವ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ ಎಂದು ಈ ವಾರಾಂತ್ಯಕ್ಕೆ ಕಾರ್ಯಕ್ರಮದಲ್ಲಿ ನೋಡಬೇಕಿದೆ.