Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದಲ್ಲಿ ಈ ವಾರ ರಿಯಾಲಿಟಿ ಶೋಗಳ ಮಹಾಸಂಭ್ರಮ
ಜೀ ಕನ್ನಡ ವಾಹಿನಿ ಈ ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಜನಪ್ರಿಯ ರಿಯಾಲಿಟಿ ಶೋಗಳಾದ "ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್" ಹಾಗೂ "ಕಾಮಿಡಿ ಕಿಲಾಡಿಗಳು" ಎರಡೂ ಕಾರ್ಯಕ್ರಮಗಳ "ಮಹಾಸಂಭ್ರಮ" ಪ್ರಸಾರ ಮಾಡಲಿದೆ.
ಲಾಕ್ ಡೌನ್ ಸಮಯದಲ್ಲಿ ಧಾರಾವಾಹಿಗಳ ಮರು ಪ್ರಸಾರದ ಸಮಸ್ಯೆಯಿಲ್ಲದೆ ಹೊಚ್ಚ ಹೊಸ ಕಂಟೆಂಟ್ ಪ್ರಸಾರವಾಗಲಿದೆ. ಜೀ ಕನ್ನಡ ಪ್ರಾರಂಭದಿಂದಲೂ ತನ್ನ ಅಚ್ಚುಮೆಚ್ಚಿನ ವೀಕ್ಷಕರಿಗೆ ವಿಶೇಷ ಮನರಂಜನೆಯ ಕಾರ್ಯಕ್ರಮಗಳನ್ನು ನೀಡುತ್ತಿದೆ.
ಕನ್ನಡ ಕಿರುತೆರೆ ಇತಿಹಾಸದಲ್ಲೇ ದಾಖಲೆ ನಿರ್ಮಿಸಿದ 'ಜೊತೆ ಜೊತೆಯಲಿ' ಧಾರಾವಾಹಿ
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ನ ಅದ್ಭುತ ನೃತ್ಯ, ಸರಿಗಮಪದ ಅದ್ಭುತ ಸಂಗೀತ ಕಾರ್ಯಕ್ರಮ ಹಾಗೂ ವಿನೋದಮಯ ಕಾಮಿಡಿ ಕಿಲಾಡಿಗಳು ವೀಕ್ಷಕರನ್ನು ರಂಜಿಸಿವೆ. ಪ್ರತಿವಾರ ವಿನೂತನ ಬಗೆಯ ಕಾರ್ಯಕ್ರಮಗಳನ್ನು ರೂಪಿಸುವ ಈ ವಾಹಿನಿಯು ಈ ಬಾರಿ ಮೂರು ಜನಪ್ರಿಯ ರಿಯಾಲಿಟಿ ಶೋಗಳ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿದೆ.
ಅನುಶ್ರೀ ನಿರೂಪಣೆಯ "ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್" ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿದ್ದು ಜನಮನ್ನಣೆ ಪಡೆದಿದೆ. ಹಾಗೆಯೇ ನಟ ಮಾಸ್ಟರ್ ಆನಂದ್ ನಿರೂಪಣೆಯ "ಕಾಮಿಡಿ ಕಿಲಾಡಿಗಳು" ಇಡೀ ಕರ್ನಾಟಕವನ್ನು ಹಾಸ್ಯದಲ್ಲಿ ಮುಳುಗಿಸಿದೆ. ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲಿ ಕಾಲ ಕಳೆಯುತ್ತಿರುವ ಜನರಿಗೆ ಅಭೂತಪೂರ್ವ ಮನರಂಜನೆಯ ಭರವಸೆ ನೀಡಲಿದೆ.
ಸರಿಗಮಪ ತನ್ನ ಪ್ರತಿ ಸೀಸನ್ ಗೂ ಜನಪ್ರಿಯತೆ ಹೆಚ್ಚಿಸಿಕೊಂಡು ಹಲವು ಜನಪ್ರಿಯ ಗಾಯಕರನ್ನು ಹುಟ್ಟು ಹಾಕಿದೆ. ಈ ಗಾಯಕರು ಜೀ ಕನ್ನಡ ವೀಕ್ಷಕರಿಗೆ ಮನರಂಜನೆಯ ಭರಪೂರ ನೀಡಲಿದೆ.
ವಾರಾಂತ್ಯದ ಭರಪೂರ ರಂಜನೆಗೆ ಅನುಶ್ರೀ, ಆನಂದ್ ನಿರೂಪಣೆ ಮೆರುಗು ಹೆಚ್ಚಿಸಲಿದೆ. ಈ ವಾರಾಂತ್ಯಕ್ಕೆ ನೀವು ಬೇರೆ ಯಾವುದೇ ಚಾನೆಲ್ ಹುಡುಕಾಟ ನಡೆಸದೆ ಜೀ ಕನ್ನಡ ಟ್ಯೂನ್ ಆಗಿರಿ ಹಾಗೂ ಮನರಂಜನೆಯನ್ನು ಹೊಂದಿರಿ.