Tap to Read ➤

ಬೇರೆ ಸಿನಿಮಾರಂಗವನ್ನು ಕೀಳಾಗಿ ಕಾಣಬೇಡಿ ಎಂದು ಕನ್ನಡಿಗರಿಗೆ ಯಶ್ ಮನವಿ

ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದು ಕೆಜಿಎಫ್ ಸಿನಿಮಾ. ಈ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ಯಶ್, ಬೇರೆ ಸಿನಿಮಾರಂಗವನ್ನು ಕೀಳಾಗಿ ಕಾಣಬೇಡಿ ಎಂದು ಕನ್ನಡಿಗರಿಗೆ ಮನವಿ ಮಾಡಿದ್ದಾರೆ.
sowmya malnad
ಒಂದು ಕಾಲದಲ್ಲಿ ಭಾರತೀಯ ಚಿತ್ರರಂಗದಲ್ಲಿ ಬಾಲಿವುಡ್ ಚಿತ್ರೋದ್ಯಮವೇ ಬೆಸ್ಟ್ ಎನ್ನುವಂತಹ ವಾತಾವರಣವಿತ್ತು.
ಸದ್ಯ ದಕ್ಷಿಣ ಭಾರತದ ಸಿನಿಮಾಗಳು ಹಿಂದಿ ಚಿತ್ರಗಳಿಗೆ ಸವಾಲಾಗಿ ನಿಂತಿದ್ದು, ಇಂತಹ ಸಮಯದಲ್ಲಿ ಬಾಲಿವುಡ್ ಅನ್ನು ಹೀಯಾಳಿಸುವ ಕೆಲಸವೂ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ನಟ ರಾಕಿಂಗ್ ಸ್ಟಾರ್ ಯಶ್ ಯಾವ ಸಿನಿಮಾ ರಂಗವನ್ನೂ ಕೀಳಾಗಿ ಕಾಣಬೇಡಿ ಎಂದಿದ್ದಾರೆ.
ನಾವು ಈ ಹಂತವನ್ನು ತಲುಪಲು ತುಂಬಾ ಶ್ರಮ ಪಟ್ಟಿದ್ದೇವೆ. ಅವಮಾನಗಳನ್ನು ಎದುರಿಸಿದ್ದೇವೆ.
ಈ ಹೊತ್ತಿನಲ್ಲಿ ಅವರು ಮಾಡಿದ ತಪ್ಪುಗಳನ್ನು ಮಾಡುವುದು ಬೇಡ. ಯಾರನ್ನೂ ದ್ವೇಷಿಸುವುದು ಬೇಡ.
ಎಲ್ಲ ರಂಗವನ್ನು ಗೌರವಿಸಿ ಎಂದು ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ಜೊತೆಗೆ ಕನ್ನಡ ಚಿತ್ರರಂಗದ ಪ್ರತಿಯೊಬ್ಬ ನಟರೂ ಮತ್ತು ತಾಂತ್ರಿಕ ತಂಡದವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆಯಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ.
More